ಕಲಬುರಗಿ| ಆಪರೇಷನ್ ಸಿಂಧೂರ ಯಶಸ್ವಿ ಹಿನ್ನೆಲೆ; ಮೇ 17ರಂದು ತಿರಂಗಾ ಯಾತ್ರೆ 

Date:

Share post:

ಕಲಬುರಗಿ: ಪಹಲ್ಗಾಮ್ ದಾಳಿಗೆ ಪ್ರತಿಕಾರವಾಗಿ ಉಗ್ರವಾದಿಗಳನ್ನು ಸದೆಬಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಗಾಗಿ ಸೈನಿಕರನ್ನು ಬೆಂಬಲಿಸಲು ಇದೇ ಮೇ.17ರಂದು ನಗರದಲ್ಲಿ ರಾಷ್ಟ್ರ ರಕ್ಷಣೆಗಾಗಿ ನಾಗರೀಕರು ಎಂಬ ಘೋಷವಾಕ್ಯದಡಿ ಬೃಹತ್ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಶರಣು ಪಪ್ಪಾ ಹೇಳಿದ್ದಾರೆ.

ಗುರುವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಗರದ ನೆಹರೂ ಗಂಜ್ ಪ್ರದೇಶದ ನಗರೇಶ್ವರ ಶಾಲೆಯಿಂದ ಶನಿವಾರ ಸಂಜೆ 4 ಗಂಟೆಗೆ ಬೃಹತ್ ತಿರಂಗಾ ಯಾತ್ರೆ ಪ್ರಾರಂಭವಾಗಿ, ಜಗತ್ ವೃತ್ತದಲ್ಲಿ ಸಂಪನ್ನಗೊಳ್ಳಲಿದೆ. ಪಕ್ಷಭೇದ ಮರೆತು ಸರ್ವ ದೇಶ ಭಕ್ತ ನಾಗರೀಕರು ಯಾತ್ರೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ರಾಷ್ಟ್ರ ನಮಗೇನು ಕೊಟ್ಟಿದೆ ಎಂಬುದನ್ನು ಪಕ್ಕಕ್ಕಿಟ್ಟು, ರಾಷ್ಟ್ರಕ್ಕೆ ನಾವೇನೂ ಕೊಡಬಲ್ಲೆವು ಎಂಬ ವಿಚಾರಧಾರೆಯೊಂದಿಗೆ ಈ ದೇಶದ ಸೈನಿಕನ ಬೆನ್ನಿಗೆ, ದೇಶವನ್ನು ಮುನ್ನೆಡೆಸುತ್ತಿರುವ ಪ್ರಧಾನಿ ಮೋದಿಯವರ ಬೆಂಬಲಕ್ಕೆ ನಾವೆಲ್ಲರೂ ನಿಲ್ಲುವ ಮೂಲಕ ರಾಷ್ಟ್ರದ ರಕ್ಷಣೆಗೆ ಮುಂದಾಗಬೇಕಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ದಾಲ್ ಮಿಲ್ ಅಸೋಸಿಯೇಷನ್ ಅಧ್ಯಕ್ಷ ಚಂದ್ರಕಾಂತ ಕೋಬಾಳ, ನ್ಯಾಯವಾದಿ ಎಸ್.ವಿ ಪಸಾರ್, ನಾಗಣ್ಣಾ ಪಾಟೀಲ್, ಶಿವಾನಂದ ಇಂಗಿನಶೆಟ್ಟಿ,ಆನಂದ ದಂಡೋತಿ,ಸಿದ್ದು ವಾಡಿ, ಬಾಬುರಾವ್ ಹಾಗರಗುಂಡಗಿ, ವಿರೇಂದ್ರ ಪಾಟೀಲ್ ರಾಯಕೋಡ ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....