ಕಲಬುರಗಿ| ಜೈಲಿನಲ್ಲಿ ಜಾಮರ್ ಅಳವಡಿಕೆ; ಪ್ರಿಕ್ವೆಸ್ಸಿ ಕಡಿಮೆ ಮಾಡುವಂತೆ ಆಗ್ರಹ

Date:

Share post:

ಕಲಬುರಗಿ : ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಜಾಮರ್ ಅಳವಡಿಕೆ ಮಾಡಲಾಗಿದ್ದು, ಇದರಿಂದಾಗಿ ಅಕ್ಕ ಪಕ್ಕದ ಗ್ರಾಮದ ಜನರಿಗೆ ತೀವ್ರ ಸಂಕಷ್ಟವಾಗುತ್ತಿದೆ. ಕೂಡಲೇ ಪ್ರಿಕ್ವೆನ್ಸಿ ಕಡಿಮೆ ಮಾಡಬೇಕೆಂದು ಜೈಲಿನ ಸುತ್ತಮುತ್ತಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಕುರಿತು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ.ಅನಿತಾ ಅವರಿಗೆ ನಂದಿಕೂರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪವನಕುಮಾರ ವಳಕೇರಿ ನೇತೃತ್ವದಲ್ಲಿ ಪಾಣೆಗಾಂವ, ಸೀತನೂರ ಮತ್ತು ನಂದಿಕೂರ ಗ್ರಾಮಸ್ಥರು ಸೇರಿಕೊಂಡು ಮನವಿ ಪತ್ರ ಸಲ್ಲಿಸಿ, ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಪವನ್ ಕುಮಾರ್ ವಳಕೇರಿ, ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಬಾರದೆಂದು ಜಾಮರ್ ಅಳವಡಿಕೆ ಮಾಡಿದ್ದಾರೆ. ಆದರೆ ಇದರ ಶಿಕ್ಷೆ ಕೈದಿಗಳಿಗಿಂತ ಜನಸಾಮಾನ್ಯರಿಗೆ ಹೆಚ್ಚು ಆಗುತ್ತಿದೆ. ಜೈಲು ಸುತ್ತಲಿನ ಗ್ರಾಮಗಳಾದ ಪಾಣೇಗಾಂವ, ಸೀತನೂರ ಮತ್ತು ನಂದಿಕೂರ ಗ್ರಾಮಗಳ ಜನರು ತತ್ತರಿಸಿ ಹೋಗಿದ್ದಾರಲ್ಲದೆ, ಈ ಗ್ರಾಮಗಳ ಸಾರ್ವಜನಿಕರಿಗೆ ಮೊಬೈಲ್ ಕರೆಗಳು ಬರುವುದಿಲ್ಲ, ಕರೆ ಮಾಡುವ ಸಾಧ್ಯತೆಯೂ ಇಲ್ಲದಂತಾಗಿದೆ ಎಂದು ಆರೋಪಿಸಿದ್ದಾರೆ.

ಸೀತನೂರ್ ಗ್ರಾಮದಲ್ಲಿ ನೆಟ್ವರ್ಕ್ ಬ್ಯುಸಿ ಎಂದು ತೋರಿಸುತ್ತಿದು, ಫೋನ್ ಕರೆ ಮಾಡಿದವರು ತಪ್ಪಾಗಿ ಅರ್ಥಮಾಡಿಕೊಂಡಿ ಉದ್ದೇಶಪೂರ್ವಕವಾಗಿಯೇ ಕರೆ ನಿರ್ಲಕ್ಷಿಸಲಾಗಿದೆ ಎಂಬ ಭಾವನೆ ಮೂಡಿಸುತ್ತಿದ್ದಾರೆ. ಸಮಸ್ಯೆಗಳಿಂದಾಗಿ ಗ್ರಾಮಸ್ಥರು, ಅವರ ಸ್ನೇಹಿತರ, ಸಂಬಂಧಿಕರು, ಅಧಿಕಾರಿಗಳು, ಮತ್ತು ವಿದೇಶಗಳಿಂದ ಕರೆ ಮಾಡುವವರು ಮಹತ್ವದ ವಿಚಾರಗಳನ್ನು ಚರ್ಚಿಸಲು ಸಾಧ್ಯವಾಗದೆ ಬಹಳ ತೊಂದರೆ ಈಡಾಗಿದ್ದಾರೆ. ವೈಫೈ ಸಮಸ್ಯೆಯಾಗುತ್ತಿದೆ. ಆನ್‌ಲೈನ್ ಬ್ಯಾಂಕಿಂಗ್‌ಗೆ ತೊಂದರೆಯಾಗಿದೆ. ಒಟಿಪಿಗಳು ಸ್ವೀಕಾರವಾಗುತ್ತಿಲ್ಲ. ತುರ್ತು ಸೇವೆಗಳು, ಯುಪಿಐ ಪಾವತಿಗೆ ತೊಂದರೆಯಾಗಿದ್ದು, ದೈನಂದಿನ ಜನಜೀವನದ ಮೇಲೆ ಭಾರಿ ಪರಿಣಾಮ ಬೀರಿದೆ. ನಿತ್ಯದ ವ್ಯಾಪಾರ ವಹಿವಾಟು ಸೇರಿದಂತೆ ಆನ್‌ಲೈನ್ ಚಟುವಟಿಕೆಗಳಿಗೆ ತೀವ್ರ ಅಡ್ಡಿಚಣೆಯಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಹೀಗಾಗಿ ಜೈಲಿನ ಫ್ರೀಕ್ವೆನ್ಸಿ ತುಂಬಾ ಕಡಿಮೆ ಮಾಡಬೇಕು ಮತ್ತು ಅದರ ವ್ಯಾಪ್ತಿ ಕಡಿಮೆಗೊಳಿಸಿ ಜನರಿಗೆ ಯಾವುದೇ ರೀತಿ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಇದೇ ದಿ. 26ರಂದು ಮುಖ್ಯ ಹೆದ್ದಾರಿ ರಸ್ತೆ ಬಂದ್ ಮಾಡಿ ಉಗ್ರ ಹೋರಾಟ ಮಾಡಲಾಗುವದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಶಂಕರ್ ಕಾರ್ಬಾರಿ, ನಾಗೇಶ್ ಡಿ. ಮುಚಖೇಡ, ಶರಣಯ್ಯ ಸ್ವಾಮಿ ಸೀತನೂರ್ , ಹುಸೇನ್ ಸಾಬ್ ಮೋಹಜನ್, ವೀರಯ್ಯ ಸ್ವಾಮಿ, ಕಲ್ಯಾಣರಾವ್ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...