ಕಲಬುರಗಿ| ಜೈಲಿನಲ್ಲಿ ಜಾಮರ್ ಅಳವಡಿಕೆ; ಪ್ರಿಕ್ವೆಸ್ಸಿ ಕಡಿಮೆ ಮಾಡುವಂತೆ ಆಗ್ರಹ

Date:

Share post:

ಕಲಬುರಗಿ : ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಜಾಮರ್ ಅಳವಡಿಕೆ ಮಾಡಲಾಗಿದ್ದು, ಇದರಿಂದಾಗಿ ಅಕ್ಕ ಪಕ್ಕದ ಗ್ರಾಮದ ಜನರಿಗೆ ತೀವ್ರ ಸಂಕಷ್ಟವಾಗುತ್ತಿದೆ. ಕೂಡಲೇ ಪ್ರಿಕ್ವೆನ್ಸಿ ಕಡಿಮೆ ಮಾಡಬೇಕೆಂದು ಜೈಲಿನ ಸುತ್ತಮುತ್ತಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಕುರಿತು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ.ಅನಿತಾ ಅವರಿಗೆ ನಂದಿಕೂರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪವನಕುಮಾರ ವಳಕೇರಿ ನೇತೃತ್ವದಲ್ಲಿ ಪಾಣೆಗಾಂವ, ಸೀತನೂರ ಮತ್ತು ನಂದಿಕೂರ ಗ್ರಾಮಸ್ಥರು ಸೇರಿಕೊಂಡು ಮನವಿ ಪತ್ರ ಸಲ್ಲಿಸಿ, ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಪವನ್ ಕುಮಾರ್ ವಳಕೇರಿ, ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಬಾರದೆಂದು ಜಾಮರ್ ಅಳವಡಿಕೆ ಮಾಡಿದ್ದಾರೆ. ಆದರೆ ಇದರ ಶಿಕ್ಷೆ ಕೈದಿಗಳಿಗಿಂತ ಜನಸಾಮಾನ್ಯರಿಗೆ ಹೆಚ್ಚು ಆಗುತ್ತಿದೆ. ಜೈಲು ಸುತ್ತಲಿನ ಗ್ರಾಮಗಳಾದ ಪಾಣೇಗಾಂವ, ಸೀತನೂರ ಮತ್ತು ನಂದಿಕೂರ ಗ್ರಾಮಗಳ ಜನರು ತತ್ತರಿಸಿ ಹೋಗಿದ್ದಾರಲ್ಲದೆ, ಈ ಗ್ರಾಮಗಳ ಸಾರ್ವಜನಿಕರಿಗೆ ಮೊಬೈಲ್ ಕರೆಗಳು ಬರುವುದಿಲ್ಲ, ಕರೆ ಮಾಡುವ ಸಾಧ್ಯತೆಯೂ ಇಲ್ಲದಂತಾಗಿದೆ ಎಂದು ಆರೋಪಿಸಿದ್ದಾರೆ.

ಸೀತನೂರ್ ಗ್ರಾಮದಲ್ಲಿ ನೆಟ್ವರ್ಕ್ ಬ್ಯುಸಿ ಎಂದು ತೋರಿಸುತ್ತಿದು, ಫೋನ್ ಕರೆ ಮಾಡಿದವರು ತಪ್ಪಾಗಿ ಅರ್ಥಮಾಡಿಕೊಂಡಿ ಉದ್ದೇಶಪೂರ್ವಕವಾಗಿಯೇ ಕರೆ ನಿರ್ಲಕ್ಷಿಸಲಾಗಿದೆ ಎಂಬ ಭಾವನೆ ಮೂಡಿಸುತ್ತಿದ್ದಾರೆ. ಸಮಸ್ಯೆಗಳಿಂದಾಗಿ ಗ್ರಾಮಸ್ಥರು, ಅವರ ಸ್ನೇಹಿತರ, ಸಂಬಂಧಿಕರು, ಅಧಿಕಾರಿಗಳು, ಮತ್ತು ವಿದೇಶಗಳಿಂದ ಕರೆ ಮಾಡುವವರು ಮಹತ್ವದ ವಿಚಾರಗಳನ್ನು ಚರ್ಚಿಸಲು ಸಾಧ್ಯವಾಗದೆ ಬಹಳ ತೊಂದರೆ ಈಡಾಗಿದ್ದಾರೆ. ವೈಫೈ ಸಮಸ್ಯೆಯಾಗುತ್ತಿದೆ. ಆನ್‌ಲೈನ್ ಬ್ಯಾಂಕಿಂಗ್‌ಗೆ ತೊಂದರೆಯಾಗಿದೆ. ಒಟಿಪಿಗಳು ಸ್ವೀಕಾರವಾಗುತ್ತಿಲ್ಲ. ತುರ್ತು ಸೇವೆಗಳು, ಯುಪಿಐ ಪಾವತಿಗೆ ತೊಂದರೆಯಾಗಿದ್ದು, ದೈನಂದಿನ ಜನಜೀವನದ ಮೇಲೆ ಭಾರಿ ಪರಿಣಾಮ ಬೀರಿದೆ. ನಿತ್ಯದ ವ್ಯಾಪಾರ ವಹಿವಾಟು ಸೇರಿದಂತೆ ಆನ್‌ಲೈನ್ ಚಟುವಟಿಕೆಗಳಿಗೆ ತೀವ್ರ ಅಡ್ಡಿಚಣೆಯಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಹೀಗಾಗಿ ಜೈಲಿನ ಫ್ರೀಕ್ವೆನ್ಸಿ ತುಂಬಾ ಕಡಿಮೆ ಮಾಡಬೇಕು ಮತ್ತು ಅದರ ವ್ಯಾಪ್ತಿ ಕಡಿಮೆಗೊಳಿಸಿ ಜನರಿಗೆ ಯಾವುದೇ ರೀತಿ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಇದೇ ದಿ. 26ರಂದು ಮುಖ್ಯ ಹೆದ್ದಾರಿ ರಸ್ತೆ ಬಂದ್ ಮಾಡಿ ಉಗ್ರ ಹೋರಾಟ ಮಾಡಲಾಗುವದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಪ್ರಮುಖರಾದ ಶಂಕರ್ ಕಾರ್ಬಾರಿ, ನಾಗೇಶ್ ಡಿ. ಮುಚಖೇಡ, ಶರಣಯ್ಯ ಸ್ವಾಮಿ ಸೀತನೂರ್ , ಹುಸೇನ್ ಸಾಬ್ ಮೋಹಜನ್, ವೀರಯ್ಯ ಸ್ವಾಮಿ, ಕಲ್ಯಾಣರಾವ್ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...