ಕಲಬುರಗಿ: ಕಲಬುರಗಿ ಜಿಲ್ಲೆಯ ದಕ್ಷ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರ ಬಗ್ಗೆ ಇತ್ತೀಚೆಗೆ ವಿಧಾನ ಪರಿಷತ್ ಶಾಸಕ ಎನ್.ರವಿಕುಮಾರ ಅವರ ಅವಹೇಳನಕಾರಿ ಹೇಳಿಕೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.
ಈ ರೀತಿಯ ಹೇಳಿಕೆಯಿಂದ ಸರ್ಕಾರಿ ಅಧಿಕಾರಿ-ನೌಕರರ ಆತ್ಮಸ್ಥೈರ್ಯ ಕುಸಿಯುವಂತಾಗುತ್ತದೆ. ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಜಿಲ್ಲೆಯ ಅಭಿವೃದ್ದಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.