ಕಲಬುರಗಿ| ಗಂಗಾ ಕಲ್ಯಾಣ ಬಿಲ್ ಪಾಸ್ ಮಾಡುವುದಕ್ಕಾಗಿ 2 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಜೆಸ್ಕಾಂ ಅಧಿಕಾರಿ

Date:

Share post:

ಕಲಬುರಗಿ: ವಿದ್ಯುತ್ ಹೆಚ್ಚುವರಿ ಟಿಸಿ, ಲೈನ್ ಮೈಂಟೆನನ್ಸ್, ಹೊಸ ಟಿಸಿಗಳು ಮತ್ತು ಗಂಗಾ ಕಲ್ಯಾಣ ಯೋಜನೆಗಳ ಬಿಲ್ಲುಗಳು ಪಾಸ್ ಮಾಡೋದಕ್ಕೆ ಲಂಚಕ್ಕೆ ಬಿಡಿಕೆಟ್ಟಿದ್ದ ಜೆಸ್ಕಾಂ ಎಂಜಿನಿಯರ್ ಒಬ್ಬರು 2 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಬಿದ್ದಿರುವ ಘಟನೆ ಮಂಗಳವಾರ ನಡೆದಿದೆ.

ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿಯ (ಗು.ವಿ.ಸ.ಕಂ.ನಿ) ಗ್ರಾಮೀಣ ವಿಭಾಗ-2ರ ಕಾರ್ಯನಿರ್ವಾಹಕ ಅಭಿಯಂತರ ಶೇಖರ್ ಬಹುರೂಪಿ ಎಂಬಾತರೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಅಧಿಕಾರಿ ಎಂದು ತಿಳಿದುಬಂದಿದೆ.

ಜೇವರ್ಗಿಯ ಕಾಂಟ್ರಾಕ್ಟರ್ ಸಾಯಬಣ್ಣ ಪೂಜಾರಿ ಲೋಕಾಯುಕ್ತಕ್ಕೆ ದೂರು ನೀಡಿದ ಮೇರೆಗೆ ಲೋಕಾಯುಕ್ತ ಪೊಲೀಸರು ಪ್ರತ್ಯೇಕ ತಂಡವನ್ನು ರಚಿಸಿ ಚುರುಕು ಕಾರ್ಯಾಚರಣೆಯಲ್ಲಿ ಆರೋಪಿ ಎಂಜಿನಿಯರ್ ಶೇಖರ್ ಅವರನ್ನು ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ ನಲ್ಲಿ ಸೆರೆ ಹಿಡಿದಿದ್ದಾರೆ.

ಲೋಕಾಯುಕ್ತ ಎಸ್ಪಿ ಬಿಕೆ. ಉಮೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೀತಾ ಬೆನಾಳ ಅವರ ನೇತೃತ್ವದ ತಂಡದಲ್ಲಿ ದಾಳಿ ನಡೆಸಲಾಗಿದೆ. ತಂಡದಲ್ಲಿ ಪೊಲೀಸ್ ಸಿಬ್ಬಂದಿಯವರಾದ ಬಸವರಾಜ್, ಎಂ. ಜಿ. ರಾಣುಜಿ, ಪ್ರದೀಪ್, ಹಣಮಂತ, ವಸಂತ್ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...