ಕಲಬುರಗಿ| ಅಮೃತ್‌ ಮಿತ್ರ ಅಭಿಯಾನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

Date:

Share post:

ಕಲಬುರಗಿ: ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಅರಣ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಶಹಾಬಜಾರ್ ಪ್ರದೇಶದ ಗೋಕುಲ ನಗರ ಜಿ.ಡಿ.ಎ. ಬಡಾವಣೆಯ ಸಾರ್ವಜನಿಕ ಉದ್ಯಾನವನದಲ್ಲಿ ಸಸಿ ನೆಡೆಯುವ ಮೂಲಕ “ಅಮೃತ್ ಮಿತ್ರ” ಅಭಿಯಾನಕ್ಕೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಚಾಲನೆ ನೀಡಿದರು.

ವುಮೆನ್ ಫಾರ್ ಟ್ರೀಸ್ ಘೋಷವಾಕ್ಯದ ಈ ಕಾರ್ಯಕ್ರಮದಲ್ಲಿ ಕಲಬುರಗಿ ಮಹಾನಗರದ ಸಾರ್ವಜನಿಕ ಉದ್ಯಾನವನ, ಮೈದಾನಗಳಲ್ಲಿ ಸುಮಾರು 2,000 ಸಸಿ ನೆಡಲಾಗುತ್ತಿದೆ. ಸಸಿಗಳನ್ನು ನಲ್ಮ್ ಯೋಜನೆಯಡಿ ನೊಂದಾಯಿತ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ನೀಡಲಾಗುತ್ತಿದ್ದು, ಅವರು ಆಗಸ್ಟ್ 31ರೊಳಗೆ ಸಸಿ ನೆಟ್ಟು ವರದಿ ನೀಡಲಿದ್ದಾರೆ. ಮುಂದೆ 2 ವರ್ಷದ ವರೆಗೆ ಈ ಸಸಿಗಳ ನಿರ್ವಹಣೆ ಜವಾಬ್ದಾರಿ ಸಹ ಮಹಿಳಾ ಸದಸ್ಯರಿಗೆ ನೀಡಿದ್ದು, ನಿರ್ವಹಣಾ ವೆಚ್ಚ ಕೇಂದ್ರ ಸರ್ಕಾರದಿಂದ ಡಿ.ಬಿ.ಟಿ ಮೂಲಕ ಪಾವತಿಸಲಾಗುತ್ತದೆ.

ಕಾರ್ಯಕ್ರಮದಲ್ಲಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ, ಪಾಲಿಕೆ ಉಪ ಆಯುಕ್ತ ಆರ್.ಪಿ. ಜಾಧವ, ಉಪ ಆಯುಕ್ತ (ಆಡಳಿತ) ರಾಜೇಂದ್ರ ಭಾಲ್ಕಿ, ಎ.ಇ.ಇ (ಪರಿಸರ) ಅಭಯಕುಮಾರ, ವಲಯ ಆಯುಕ್ತ ಪ್ರದೀಪ್ ಸೇರಿದಂತೆ ಪಾಲಿಕೆ, ಅರಣ್ಯ ಸಿಬ್ಬಂದಿಗಳು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...