ಕಲಬುರಗಿ| ಅಮೃತ್‌ ಮಿತ್ರ ಅಭಿಯಾನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

Date:

Share post:

ಕಲಬುರಗಿ: ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಅರಣ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಶಹಾಬಜಾರ್ ಪ್ರದೇಶದ ಗೋಕುಲ ನಗರ ಜಿ.ಡಿ.ಎ. ಬಡಾವಣೆಯ ಸಾರ್ವಜನಿಕ ಉದ್ಯಾನವನದಲ್ಲಿ ಸಸಿ ನೆಡೆಯುವ ಮೂಲಕ “ಅಮೃತ್ ಮಿತ್ರ” ಅಭಿಯಾನಕ್ಕೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಚಾಲನೆ ನೀಡಿದರು.

ವುಮೆನ್ ಫಾರ್ ಟ್ರೀಸ್ ಘೋಷವಾಕ್ಯದ ಈ ಕಾರ್ಯಕ್ರಮದಲ್ಲಿ ಕಲಬುರಗಿ ಮಹಾನಗರದ ಸಾರ್ವಜನಿಕ ಉದ್ಯಾನವನ, ಮೈದಾನಗಳಲ್ಲಿ ಸುಮಾರು 2,000 ಸಸಿ ನೆಡಲಾಗುತ್ತಿದೆ. ಸಸಿಗಳನ್ನು ನಲ್ಮ್ ಯೋಜನೆಯಡಿ ನೊಂದಾಯಿತ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ನೀಡಲಾಗುತ್ತಿದ್ದು, ಅವರು ಆಗಸ್ಟ್ 31ರೊಳಗೆ ಸಸಿ ನೆಟ್ಟು ವರದಿ ನೀಡಲಿದ್ದಾರೆ. ಮುಂದೆ 2 ವರ್ಷದ ವರೆಗೆ ಈ ಸಸಿಗಳ ನಿರ್ವಹಣೆ ಜವಾಬ್ದಾರಿ ಸಹ ಮಹಿಳಾ ಸದಸ್ಯರಿಗೆ ನೀಡಿದ್ದು, ನಿರ್ವಹಣಾ ವೆಚ್ಚ ಕೇಂದ್ರ ಸರ್ಕಾರದಿಂದ ಡಿ.ಬಿ.ಟಿ ಮೂಲಕ ಪಾವತಿಸಲಾಗುತ್ತದೆ.

ಕಾರ್ಯಕ್ರಮದಲ್ಲಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ, ಪಾಲಿಕೆ ಉಪ ಆಯುಕ್ತ ಆರ್.ಪಿ. ಜಾಧವ, ಉಪ ಆಯುಕ್ತ (ಆಡಳಿತ) ರಾಜೇಂದ್ರ ಭಾಲ್ಕಿ, ಎ.ಇ.ಇ (ಪರಿಸರ) ಅಭಯಕುಮಾರ, ವಲಯ ಆಯುಕ್ತ ಪ್ರದೀಪ್ ಸೇರಿದಂತೆ ಪಾಲಿಕೆ, ಅರಣ್ಯ ಸಿಬ್ಬಂದಿಗಳು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜ್ಞಾನಕ್ಕೆ ಸಮಾನವಾದುದ್ದು ಮತ್ತೊಂದಿಲ್ಲ: ಎನ್.ಎಂ.ಬಿರಾದಾರ

ಕಲಬುರಗಿ: ಜಗತ್ತಿನಲ್ಲಿ ಜ್ಞಾನಕ್ಕಿರುವುಷ್ಟು ಬೆಲೆ ಬೇರೆ ಯಾವ ವಸ್ತುವಿಗೂ ಇಲ್ಲ ಎಂದು...

ಕಲಬುರಗಿ| ದಂತ ವೈದ್ಯಕೀಯ ಕ್ಷೇತ್ರವು ಸ್ಪರ್ಧಾತ್ಮಕ ಕ್ಷೇತ್ರವಾಗಿ ಬೆಳೆದಿದೆ: ಡಾ. ಶಿವಶರಣ ಕೆ.

ಕಲಬುರಗಿ: ಇತ್ತಿಚಿನ ದಿನಗಳಲ್ಲಿ ದಂತವೈದ್ಯಶಾಸ್ತ್ರವು ಹೆಚ್ಚು ಸ್ಪರ್ಧಾತ್ಮಕ ಕ್ಷೇತ್ರವಾಗಿ ಬೆಳೆಯುತ್ತಿದೆ, ಹಾಗಾಗಿ...

ಕಲಬುರಗಿ| ಯುಪಿಎಸ್ಸಿ, ಕೆಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ತರಬೇತಿಗೆ ಅರ್ಜಿ ಆಹ್ವಾನ

ಕಲಬುರಗಿ: ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ 2025-26ನೇ ಸಾಲಿಗೆ ಯುಪಿಎಸ್ಸಿ, ಕೆಎಎಸ್ ಸೇರಿದಂತೆ ವಿವಿಧ...

ಬೀದರ್| ಭಿಕ್ಷಾಟನೆ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಸಹಕರಿಸಿ : ಡಿ.ಸಿ ಶಿಲ್ಪಾ ಶರ್ಮಾ

ಬೀದರ್ : ಜಿಲ್ಲೆಯ ಸಾರ್ವಜನಿಕರು ಭಿಕ್ಷೆ ಬೇಡುತ್ತಿರುವುದು ಕಂಡು ಬಂದರೆ ಅವರಿಗೆ...