ಕಲಬುರಗಿ: ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಶನಿವಾರ ಜೇವರ್ಗಿ ತಾಲೂಕಿನ ಸರಡಗಿ ಬ್ರೀಡ್ಜ್ನಲ್ಲಿ ನಡೆದಿದೆ.
ಮಹಾದೇವ್ (20) ನದಿ ಪಾಲಾದ ಯುವಕ ಎಂದು ತಿಳಿದುಬಂದಿದೆ.ಕಲಬುರಗಿಯಿಂದ ಐದು ಜನ ಸ್ನೇಹಿತರು ಕೂಡಿಕೊಂಡು ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದರು. ಈ ವೇಳೆ ಈಜು ಬಾರದೇ ಮಹಾದೇವ್ ನದಿಯಲ್ಲಿ ನಾಪತ್ತೆಯಾಗಿದ್ದಾನೆ.
ಅಗ್ನಿಶಾಮಕ ದಳದಿಂದ ಶೋಧಕಾರ್ಯಯು ಮುಂದುವರೆದಿದೆ.ಘಟನೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


