ಕಲಬುರಗಿ: ಚಾಕುವಿನಿಂದ ಕತ್ತು ಮತ್ತು ಟೊಂಕಕ್ಕೆ ಇರಿದು ಮಹಿಳೆಯೋರ್ವಳನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಶಹಾಬಜಾರ್ ಪ್ರದೇಶದಲ್ಲಿ ನಡೆದಿದೆ.
ರೂಪಾ ವೆಂಕಟೇಶ್ ಬಿರಾದಾರ(33) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕೊಲೆಯಾದ ರೂಪಾ ಕಲ್ಲಹಂಗರ್ಗ ಗ್ರಾಮದವರಾಗಿದ್ದು, ಶಹಾ ಬಜಾರ್ ನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
10 ವರ್ಷಗಳ ಹಿಂದೆ ವೆಂಕಟೇಶ್ ಜೊತೆಗೆ ಮದುವೆಯಾಗಿತ್ತು, ಅನೈತಿಕ ಸಂಬಂಧ ಹೊಂದಿರುವ ಕಾರಣಕ್ಕಾಗಿಯೇ ಆಕೆಯ ಗಂಡನೇ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮತ್ತಷ್ಟು ತನಿಖೆಯಿಂದ ಸತ್ಯ ಹೊರಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.