ಕಲಬುರಗಿ: ನ್ಯಾಯಾಲಯದ ಚೇಂಬರ್ ನಲ್ಲಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿ ನ್ಯಾಯಾಧೀಶರೊಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಜಿಲ್ಲಾ ಕೋರ್ಟ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶ ವಿಶ್ವನಾಥ್ ಮುಗುಟಿ (44) ಎಂಬಾತರೆ ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಜಿಲ್ಲಾ ಕೋರ್ಟ್ನ ಚೇಂಬರ್ ನಲ್ಲಿದ್ದಾಗಲೇ ಎದೆನೋವಿನ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತ್ವರಿತವಾಗಿ ಇಲ್ಲಿನ ಜಯದೇವ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅದಾಗಲೇ ಅವರು ಮೃತಪಟ್ಟಿದ್ದರು ಎಂಬುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಮೃತ ನ್ಯಾಯಾಧೀಶ ವಿಶ್ವನಾಥ್ ಮುಗುಟಿ ಅವರು ಕೇವಲ 15 ದಿನಗಳ ಹಿಂದೆ ಕಲಬುರಗಿ ಕೋರ್ಟ್ಗೆ ವರ್ಗಾವಣೆಯಾಗಿದ್ದರು. ಜಡ್ಜ್ ಅಗಲಿಕೆಗೆ ಕಲಬುರಗಿ ಜಿಲ್ಲಾ ಬಾರ್ ಅಸೋಸಿಯೇಷನ್ ಕಂಬನಿ ಮಿಡಿದಿದ್ದು, ಸೋಮವಾರ ಕೋರ್ಟ್ ಕಲಾಪವನ್ನು ಸ್ಥಗಿತಗೊಳಿಸಿ ಪ್ರಕಟಣೆ ಹೊರಡಿಸಿದ್ದಾರೆ.