ಕಲಬುರಗಿ| ವಿವಿಧ ಕಲ್ಯಾಣ ಕಾರ್ಯಕ್ರಮಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Date:

Share post:

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಶೇ. 24.10ರ ಅನುಮೋದಿತ ಕ್ರಿಯಾ ಯೋಜನೆ 2012-13 ಮತ್ತು 2014-15ನೇ ಸಾಲಿನ ಪಾಲಿಕೆ ನಿಧಿ ಹಾಗೂ 2009-10 ರಿಂದ 2015-16ನೇ ಸಾಲಿನ ಪರಿಷ್ಕøತ ಕ್ರೀಯಾ ಯೋಜನೆಯಡಿ ನಿಗದಿಪಡಿಸಿದ ಕೆಳಕಂಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕಲ್ಯಾಣ ಕಾರ್ಯಕ್ರಮಗಳಡಿ 2025-26 ನೇ ಸಾಲಿಗೆ ಕೆಳಕಂಡ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

2012-13 ಮತ್ತು 2014-15ನೇ ಸಾಲಿನ ಪಾಲಿಕೆ ನಿಧಿಯಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯ ಭವನಗಳಿಗೆ ಆಟದ ಸಾಮಗ್ರಿಗಳು ಒದಗಿಸಲು, 2009-10 ರಿಂದ 2015-16 ನೇ ಸಾಲಿನ ಪರಿಷ್ಕøತ ಕ್ರೀಯಾ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಮುದಾಯ ಭವನಗಳಿಗೆ ಶವಪೆಟ್ಟಿಗೆ (ಫ್ರೀಜರ) ಒದಗಿಸಲು ಹಾಗೂ 2015-16ನೇ ಸಾಲಿನ ಎಸ್.ಎಫ್.ಸಿ ಕ್ರಿಯಾ ಯೋಜನೆ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಜನರಿಗೆ ಬ್ಯಾಂಡಸೆಟ್ ವಿತರಿಸಲಾಗುತ್ತಿದೆ.

ಅರ್ಹ ಫಲಾನುಭವಿಗಳು ಕಲಬುರಗಿ ಮಹಾನಗರ ಪಾಲಿಕೆಯ ಶೇ. 24.10 ಮತ್ತು ಆವಕ ಶಾಖೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಕಚೇರಿ ಸಮಯದಲ್ಲಿ 2025ರ ಜೂನ್ 26 ರೊಳಗಾಗಿ  ಪಡೆದು ಭರ್ತಿ ಮಾಡಿ ಅವಶ್ಯಕಗಳನ್ನು ಕಡ್ಡಾಯವಾಗಿ ದೃಢೀಕರಣದೊಂದಿಗೆ  2025ರ ಜೂನ್ 26ರ ಸಂಜೆ 4.30 ಗಂಟೆಯೊಳಗಾಗಿ ಸದರಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.

ಈ ಮೊದಲು ಮಹಾನಗರ ಪಾಲಿಕೆಯಿಂದ ಅಥವಾ ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯ  ಪಡೆದವರು ಪುನಃ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವಂತಿಲ್ಲ.  ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಹಾನಗರ  ಪಾಲಿಕೆಯ ಶೇ. 24.10ರ ಶಾಖೆಯನ್ನು ಹಾಗೂ ಮಹಾನಗರ ಪಾಲಿಕೆಯ  http://www.kalaburagicity.mrc.gov  ವೆಬ್‍ಸೈಟ್‍ನ್ನು ಸಂಪರ್ಕಿಸಬೇಕು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...