ಕಲಬುರಗಿ| ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಡಿ.ಪಿ.ಆರ್ ಸಿದ್ದಪಡಿಸುವಂತೆ ಡಿ.ಸಿ ಸೂಚನೆ

Date:

Share post:

ಕಲಬುರಗಿ: ಕರ್ನಾಟಕ ಪ್ರವಾಸೋದ್ಯಮ ನೀತಿಯಡಿ ಜಿಲ್ಲೆಯಾದ್ಯಂತ ಗುರುತಿಸಿರುವ 30 ಪ್ರವಾಸಿ ತಾಣಗಳಲ್ಲಿ ಕನಿಷ್ಟ ಮೂಲಸೌಕರ್ಯ ಕಲ್ಪಿಸಲು ಡಿ.ಪಿ.ಆರ್ ಸಿದ್ದಪಡಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರವಾಸೋದ್ಯಮ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ಪ್ರವಾಸೋದ್ಯಮ ಇಲಾಖೆಯು ಜಂಟಿಯಾಗಿ ಪ್ರವಾಸಿ ತಾಣಗಳಿಗೆ ಭೇಟಿ ಕೊಟ್ಟು ಸ್ಥಳೀಯರ ಅಪೇಕ್ಷೆಯಂತೆ ಡಿ.ಪಿ.ಆರ್ ತಯಾರಿಸಬೇಕು. ತುರ್ತಾಗಿ ಪ್ರವಾಸಿ ತಾಣಗಳಲ್ಲಿ ಸೈನೇಜ್ ಬೋರ್ಡ್ ಅಳವಡಿಕೆ ಕಾರ್ಯ ಮಾಡಬೇಕು ಎಂದರು.

ಜಿಲ್ಲೆಯ ಪ್ರವಾಸಿ ತಾಣಗಳು ಕುರಿತು ಹೆದ್ದಾರಿ ಫಲಕಗಳ ಮೂಲಕ ವ್ಯಾಪಕ ಪ್ರವಾರ ನೀಡಿ ಪ್ರವಾಸೋದ್ಯಮ ಉತ್ತೇಜಿಸಬೇಕು. ಪ್ರವಾಸಿ ತಾಣಗಳ ಮಾಹಿತಿವುಳ್ಳ ಬ್ರೋಚರ್ ಮುದ್ರಿಸಿ ಹಂಚಬೇಕು. ಇದಲ್ಲದೆ ಜಿಲ್ಲೆಯ ಪ್ರವಾಸಿ ತಾಣಗಳು, ಕಲೆ, ಸಂಸ್ಕೃತಿ, ವೇಷಭೂಷಣ, ಅಹಾರ ಪದ್ದತಿ ಕುರಿತು ಕಾಫಿ ಟೇಬಲ್ ಪುಸ್ತಕ ಹೊರತರಬೇಕು ಎಂದು ಡಿ.ಸಿ. ತಿಳಿಸಿದರು.

ಕಲಬುರಗಿ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರವಾಸಿ ತಾಣಗಳ ಮೂಲಸೌಕರ್ಯ ಬಲಪಡಿಸಲು ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದರಿಂದ ಡಿ.ಪಿ.ಆರ್. ತಯ್ಯಾರಿಸಿ ಆಡಳಿತಾತ್ಮಕ ಅನುಮೋದನೆ ಪಡೆದು ಕೆಲಸ ಪ್ರಾರಂಭಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಡಿ.ಸಿ. ಸೂಚಿಸಿದರು.

ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ ಬೇಬಿ ಮೊಗೆರಾ, ರಾಜ್ಯ ಪ್ರಾಚ್ಯವಸ್ತು ಸಂಗ್ರಹಾಲಯಗಳ ಇಲಾಖೆಯ ಸಹಾಯಕ ನಿರ್ದೇಶಕ ರಾಜಾರಾಮ, ತಾಂತ್ರಿಕ ಇಂಜಿನೀಯರ್ ಪ್ರೇಮಲತಾ, ಕೆ.ಆರ್.ಐ.ಡಿ.ಎಲ್ ಇ.ಇ. ರಾಹುಲ, ಪಿ.ಆರ್.ಇ.ಡಿ ಇ.ಇ. ಮಲ್ಲಿಕಾರ್ಜುನ ಸೇರಿದಂತೆ ಪ್ರವಾಸೋದ್ಯಮ ಇಲಾಖೆ ಸಿಬ್ಬಂದಿಗಳು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...