ಕಲಬುರಗಿ| ಉತ್ತಮ ಆರೋಗಕ್ಕೆ ಯೋಗವೇ ಮದ್ದು: ಬಾಬುರಾವ ಪಾಟೀಲ 

Date:

Share post:

ಕಲಬುರಗಿ: ಇಂದಿನ ದಿನಮಾನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿಯಿಂದ ಜನರು ಅನಾರೋಗ್ಯಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ವಿಷಯ. ಹಾಗಾಗಿ ಉತ್ತಮ ಆರೋಗ್ಯವನ್ನು ವೃದ್ಧಿಸಲು ಯೋಗ ಮದ್ದು ಆಗಿದೆ ಎಂದು ನಿವೃತ್ತ ಆರೋಗ್ಯ ಅಧಿಕಾರಿಗಳಾದ ಬಾಬುರಾವ ಪಾಟೀಲ ಚಿತ್ತಕೋಟೆ ಹೇಳಿದರು.

ಅವರು ನಗರದ ಜಿಡಿಎ ಲೇಔಟಿನ ದತ್ತಾತ್ರೆಯ ಪಾಟೀಲ ರೇವೂರ ಉದ್ಯಾನವನವದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ವೆ ಸಾಮಾನ್ಯ ಯೋಗಾಸನ ಒಂದು ಉತ್ತಮ ಔಷಧಿ ಇದ್ದಂತೆ ದಿನನಿತ್ಯ ಯೋಗಾಸನ ಮಾಡುವುದರಿಂದ ಅನೇಕ ರೋಗಗಳು ಬರದಂತೆ ತಡೆಗಟ್ಟಬಹುದಲ್ಲದೆ ಬಂದಂತಹ ರೋಗಗಳು ನಿವಾರಿಸಬಹುದು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಭೀಮಾಶಂಕರ ಅಂಕಲಗಿ, ಎಸ್.ಜಿ.ಬಿರಾದಾರ, ಸಾಯಿಬಣ್ಣ ನೀಲಪ್ಪಗೋಳ, ಮಲ್ಲಣ್ಣ ದೇಸಾಯಿ, ನಿಜಲಿಂಗ ಗುಗ್ಗರಿ, ಶಿವಕುಮಾರ ದೇಸಾಯಿ, ರಾಜಶೇಖರ ಸರ್ ಹಾಗೂ ಇತರರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...