ಕಲಬುರಗಿ| ಉತ್ತಮ ಆರೋಗಕ್ಕೆ ಯೋಗವೇ ಮದ್ದು: ಬಾಬುರಾವ ಪಾಟೀಲ 

Date:

Share post:

ಕಲಬುರಗಿ: ಇಂದಿನ ದಿನಮಾನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿಯಿಂದ ಜನರು ಅನಾರೋಗ್ಯಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ವಿಷಯ. ಹಾಗಾಗಿ ಉತ್ತಮ ಆರೋಗ್ಯವನ್ನು ವೃದ್ಧಿಸಲು ಯೋಗ ಮದ್ದು ಆಗಿದೆ ಎಂದು ನಿವೃತ್ತ ಆರೋಗ್ಯ ಅಧಿಕಾರಿಗಳಾದ ಬಾಬುರಾವ ಪಾಟೀಲ ಚಿತ್ತಕೋಟೆ ಹೇಳಿದರು.

ಅವರು ನಗರದ ಜಿಡಿಎ ಲೇಔಟಿನ ದತ್ತಾತ್ರೆಯ ಪಾಟೀಲ ರೇವೂರ ಉದ್ಯಾನವನವದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ವೆ ಸಾಮಾನ್ಯ ಯೋಗಾಸನ ಒಂದು ಉತ್ತಮ ಔಷಧಿ ಇದ್ದಂತೆ ದಿನನಿತ್ಯ ಯೋಗಾಸನ ಮಾಡುವುದರಿಂದ ಅನೇಕ ರೋಗಗಳು ಬರದಂತೆ ತಡೆಗಟ್ಟಬಹುದಲ್ಲದೆ ಬಂದಂತಹ ರೋಗಗಳು ನಿವಾರಿಸಬಹುದು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಭೀಮಾಶಂಕರ ಅಂಕಲಗಿ, ಎಸ್.ಜಿ.ಬಿರಾದಾರ, ಸಾಯಿಬಣ್ಣ ನೀಲಪ್ಪಗೋಳ, ಮಲ್ಲಣ್ಣ ದೇಸಾಯಿ, ನಿಜಲಿಂಗ ಗುಗ್ಗರಿ, ಶಿವಕುಮಾರ ದೇಸಾಯಿ, ರಾಜಶೇಖರ ಸರ್ ಹಾಗೂ ಇತರರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...