ಕಲಬುರಗಿ| ಅಕ್ರಮ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳದ ಮಹಾನಗರ ಪಾಲಿಕೆ ವಿರುದ್ಧ ಜೆಪಿ ಸಂಘಟನೆ ಪ್ರತಿಭಟನೆ 

Date:

Share post:

ಕಲಬುರಗಿ: ನಗರದಲ್ಲಿ ತಲೆ ಎತ್ತಿರುವ ಅಕ್ರಮ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳದೇ ಕಾಲ ಹರಣ ಮಾಡುತ್ತಿರುವ ಕಲಬುರಗಿಯ ಪಾಲಿಕೆ ಆಯುಕ್ತರು, ಮೇಯರ್ ಮತ್ತು ಶಾಸಕರ ನೀತಿ ಖಂಡಿಸಿ, ಪಾಲಿಕೆಯ ಕಚೇರಿಯ ಎದುರುಗಡೆ ಜನತಾ ಪರಿವಾರ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

 

ನಕಲಿ ಕಟ್ಟಡ ಪರವಾನಗಿಗಳ ಮೇಲೆ ಯಾವುದೇ ಕ್ರಮವಿಲ್ಲ, ಪಾಲಿಕೆಯಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ, ಇ ಖಾತಾ (ಎ ಮತ್ತು ಬಿ) ಖಾತಾ ನಡುವಿನ ವ್ಯತ್ಯಾಸದ ಸಮಸ್ಯೆ ಬಗೆ ಹರಿಸದಿರುವುದು, ಹೆಚ್ಚುತ್ತಿರುವ ಬೀದಿ ನಾಯಿಗಳ ದಾಳಿಯ ಕುರಿತು ಕ್ರಮ, ಸರ್ವೀಸ್ ರಸ್ತೆಗಳ ಸಮಸ್ಯೆಗಳು, ಕಾರ್ಪೊರೇಷನ್ ಸಂಕೀರ್ಣದ ಸಮಸ್ಯೆಗಳು, ಅನೈರ್ಮಲ್ಯ ಕುಡಿಯುವ ನೀರಿನ ಸಮಸ್ಯೆ, ಸೇರಿದಂತೆ ಕಸ ವಿಲೇವಾರಿ, ವಿದ್ಯುತ್ ಕಂಬಗಳು, ಒಳಚರಂಡಿ ಮತ್ತು 24/7 ನೀರು ಸರಬರಾಜು ಮಾಡಬೇಕೆಂದು ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದರು.

 

ಈ ಸಂದರ್ಭದಲ್ಲಿ ಮಾತನಾಡಿದ ಜನತಾ ಪರಿವಾರ ಸಂಘಟನೆ ಅಧ್ಯಕ್ಷ ಸಿರಾಜ್ ಶಾಬ್ಧಿ, ಪಾಲಿಕೆಯ ಕೆಲವು ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಹಣ ಪಡೆದುಕೊಂಡು ಅಕ್ರಮ ಕಟ್ಟಡಗಳಿಗೆ ಪರವಾನಗಿ ಕೊಡುತ್ತಿದ್ದಾರೆ. ಇಂತಹ ಕೆಲಸಗಳಿಂದಾಗಿ ನಗರ ವಾಸಿಗಳ ನಡುವೆ ಮಾರಣಾಂತಿಕ ಹಲ್ಲೆ ಪ್ರಕರಣಗಳು ನಡೆಯುತ್ತಿವೆ. ಕೂಡಲೇ ಇವುಗಳ ಬಗ್ಗೆ ಎಚ್ಚೆತ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಖಾಲೀದ್ ಅಬ್ರಾರ್, ಶೇಖ್ ಸೈಫನ್, ಆಕಾಶ್ ರಿಡ್ಲಾನ್, ಅಝರ್ ಮುಬಾರಕ್, ಅಝಮತ್ ಉಲ್ ಖಾದ್ರಿ, ಮುಬೀನ್ ಪೆಹಾಲ್ವನ್, ಅಬ್ದುಲ್ ಖದಿರ್, ಬಷೀದ್ ಶೇಖ್, ಶೇಖ್ ಜಾವೀದ್, ಶರಣು, ಸೇರಿದಂತೆ ಹಲವರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...

ಕಲಬುರಗಿ: ಗುಂಡಿನ ದಾಳಿ; ವ್ಯಕ್ತಿಯ ಭೀಕರ ಕೊಲೆ

ಕಲಬುರಗಿ: ಬಲರಾಮ ಚೌಕ್ ನಿಂದ ವಾಡಿ ಪಟ್ಟಣಕ್ಕೆ ಸ್ಕೂಟಿ ಮೇಲೆ ಹೋಗುತ್ತಿದ್ದ...

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...