ಕಲಬುರಗಿ| ಅಂತಾರಾಷ್ಟ್ರೀಯ ವಿಧವೆಯರ ದಿನಾಚರಣೆ

Date:

Share post:

ಕಲಬುರಗಿ: ಯಾವುದೇ ಮಹಿಳೆಯು ತನ್ನ ಪತಿ ಕಳೆದುಕೊಂಡು ವಿಧವೆಯಾಗಬೇಕು ಎಂದು ಎಂದಿಗೂ ಕೂಡಾ ಬಯಸುವುದಿಲ್ಲ. ಕಾರಣಾಂತರಗಳಿಂದ ಇದು ಜರುಗುತ್ತದೆ ಎಂಬ ನೈಜತೆಯನ್ನು ಗಮನದಲ್ಲಿಟ್ಟುಕೊಂಡು, ಸಮಾಜವು ಸಂಪ್ರದಾಯದ ನೆಪದಲ್ಲಿ ಆ ಮಹಿಳೆಯನ್ನು ಕೀಳಾಗಿ ಕಾಣುವುದು ಬೇಡ. ಇದರಿಂದ ವಿಧವಾ ತಾಯಿಯು ಮನೋಸ್ಥೈರ್ಯ ಕಳೆದುಕೊಂಡು ಸಾಕಷ್ಟು ನೋವುಗಳನ್ನು ಅನುಭವಿಸಬೇಕಾಗುತ್ತದೆ. ಆದ್ದರಿಂದ ಅವರನ್ನು ಉತ್ತಮ ಮನೋಭಾವನೆಯಿಂದ ಗೌರವಿಸಿ, ನೆಮ್ಮದಿಯಿಂದ ಬದುಕಲು ಅನವು ಮಾಡಿಕೊಡುವುದು ಜವಾಬ್ದಾರಿಯುತ ಸಮಾಜದ ಆದ್ಯ ಕರ್ತವ್ಯವಾಗಿದೆ ಎಂದು ಉಪನ್ಯಾಸಕ, ಪ್ರಗತಿಪರ ಚಿಂತಕ ಎಚ್.ಬಿ.ಪಾಟೀಲ್ ಆಶಯ ವ್ಯಕ್ತಪಡಿಸಿದರು.

ನಗರದ ಹೊರವಲಯದ ರಾಣೇಸ್ಪಿರ್ ದರ್ಗಾ ರಸ್ತೆಯಲ್ಲಿರುವ ‘ನೆಮ್ಮದಿ ಹಿರಿಯರ ಮನೆ(ವೃದ್ಧಾಶ್ರಮ)’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದಿಂದ ಮಂಗಳವಾರ ಸಂಜೆ ಜರುಗಿದ ‘ಅಂತಾರಾಷ್ಟ್ರೀಯ ವಿಧವೆಯರ ದಿನಾಚರಣೆ’ಯಲ್ಲಿ ವಿಧವಾ ತಾಯಂದಿರಿಗೆ ಗೌರವಿಸಿ, ನಂತರ ಅವರು ಮಾತನಾಡುತ್ತಿದ್ದರು.

ಮಾನವ ಸಂಘ ಜೀವಿ. ಅವನ ಬದುಕಿನಲ್ಲಿ ಪರಿಸರ ಮತ್ತು ಅನೇಕ ವ್ಯಕ್ತಿಗಳ ಜೊತೆ ಸಂಬಂಧ ಹೊಂದಬೇಕಾದದ್ದು ಅಗತ್ಯವಾಗಿದೆ. ಅವನು ಕೆಲವು ನಂಬಿಕೆಗಳ ಮೇಲೆ ಜೀವನವನ್ನು ಸಾಗಿಸಬೇಕಾಗುತ್ತದೆ. ನಂಬಿಕೆಯಲ್ಲಿ ಸತ್ಯ, ವೈಜ್ಞಾನಿಕವಾಗಿದ್ದರೆ ಒಳ್ಳೆಯದು, ಆದರೆ ಕಂದಾಚಾರ, ಅಂದಶೃದ್ಧೆ, ಅವೈಜ್ಞಾನಿಕವಾದ ಮತ್ತು ಯಾವುದೇ ಆಧಾರ ರಹಿತವಾದ ನಂಬಿಕೆಗಳು ಮೂಢ ನಂಬಿಕೆಗಳಾಗುತ್ತವೆ. ನಂಬಿಕೆ ಇರಬೇಕೆ ವಿನಃ, ಮೂಡ ನಂಬಿಕೆಗಳಿರಬಾರದು. ವಿಧವೆಯರಿಗೆ ದೊರೆಯಬೇಕಾದ ಎಲ್ಲಾ ಸೌಲಭ್ಯಗಳು ಸೂಕ್ತವಾಗಿ ಸಿಗಬೇಕು. ಅವರಲ್ಲಿ ಸ್ಥೈರ್ಯ ತುಂಬುವ ಕೆಲಸವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಸಮಾಜ ಸೇವಕ ವೈದ್ಯರಾದ ಡಾ.ರಾಜಶೇಖರ ಪಾಟೀಲ್, ವೃದ್ಧಾಶ್ರಮದ ಮೇಲ್ವಿಚಾರಕಿ ಬಸಮ್ಮ ಕೆ.ಸ್ಥಾವರಮಠ, ಸಮಾಜ ಸೇವಕಿ ಪುತಾಳಾಬಾಯಿ ಮಾತಾ, ಪ್ರಮುಖರಾದ ಚನ್ನಮ್ಮ, ಶಾಂತಾಬಾಯಿ, ಭಾಗಿರತಿ, ಇಂದುಬಾಯಿ, ಲಕ್ಷ್ಮೀಬಾಯಿ, ಶಶಿಕಲಾ, ಕಮಲಾಬಾಯಿ, ಮಾಲತಿಬಾಯಿ ಸರುಬಾಯಿ, ರೇವಮ್ಮ, ನಿಂಗಮ್ಮ ವೃದ್ಧಾಶ್ರಮದ ಹಿರಿಯರು, ಬಡಾವಣೆಯ ನಾಗರಿಕರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....