ಕಲಬುರಗಿ| ಶಾಸಕ ಬಸವರಾಜ ಮತ್ತಿಮಡು ವಿರುದ್ಧ ದ್ವೇಷಕಾರಿ ಹೇಳಿಕೆ ಆರೋಪ; ಸವಿತಾನಂದ ಸ್ವಾಮೀಜಿ ವಿರುದ್ಧ ಜಾತಿ ನಿಂದನಾ ಪ್ರಕರಣ ದಾಖಲು

Date:

ಕಲಬುರಗಿ: ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಕೊಂಚೂರಿನ ಸವಿತಾ ಸಮಾಜ ಮಠದ ಧರಯ್ಯನಂದಾ ಸ್ವಾಮೀಜಿ( ಸವಿತಾನಂದ ಸ್ವಾಮೀಜಿ) ವಿರುದ್ದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಶ್ರೀನಿವಾಸ ಸರಡಗಿಯ ಮಲ್ಲಿಕಾ ರ್ಜುನ ಕಿಳ್ಳಿ ಎಂಬುವವರು ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ನಂದಿಕೂರ ತಾಂಡಾದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರ ವಿರುದ್ಧ ಪೋಕ್ಸ್ ಕಾಯ್ದೆ ಅನುಸಾರ ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಜೂ.24ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಡೆಸಿದ ಪ್ರತಿಭಟನೆ ನಡೆಸಲಾಗಿತ್ತು.

ಈ ವೇಳೆ ಮಾತನಾಡಿದ ಧರಯ್ಯಾನಂದ ಸ್ವಾ ಮೀಜಿ, ಶಾಸಕ ಬಸವರಾಜ ಮತ್ತಿಮಡು ಅವರಿಗೆ ಜಾತಿ ನಿಂದನೆ ಮಾಡಿ, ಬಿಜೆಪಿ ನಾಯಕರೇ ನೀವು ಎಲ್ಲಿದ್ದೀರಿ? ನಿಮ್ಮ ಮನೆಯ ಹೆಣ್ಣು ಮಕ್ಕಳಿಗೆ ಅನ್ಯಾಯ ಆಗುವವರೆಗೂ ಮಾತನಾಡುವುದಿಲ್ಲವೇ ಎನ್ನುತ್ತಾ ಏಕವಚನದಲ್ಲೇ ನೀನು ಎಲ್ಲಿದ್ದಿ? ಬೆಟ್ಟಿಂಗ್ ನಲ್ಲಿ ಬ್ಯುಸಿ ಆಗಿರುವೆಯೇ ಎಂದು ಹೇಳಿದ್ದಾರೆ. ಶಾಸಕರು ದಲಿತ ಸಮಾಜದವರು ಎಂದು ಗೊತ್ತಿದ್ದರೂ ಜಾತಿ ನಿಂದನೆ ಮಾಡಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

Share post:

spot_imgspot_img

Popular

More like this
Related

ಕಲಬುರಗಿ | ಭೂ ನ್ಯಾಯಮಂಡಳಿಯ ಅಧಿಕಾರೇತರ ಸದಸ್ಯರಿಗೆ ಸನ್ಮಾನ

ಕಲಬುರಗಿ; ತಾಲ್ಲೂಕು ಭೂ ನ್ಯಾಯಮಂಡಳಿಯ ಅಧ್ಯಕ್ಷರಾಗಿ ವಿಭಾಗದ ಸಹಾಯಕ ಆಯುಕ್ತರು, ಅಧಿಕಾರೇತರ...

ಕಲಬುರಗಿ| ಕಿಣ್ಣಿಸುಲ್ತಾನ ಗ್ರಾಪಂ ಉಪಾಧ್ಯಕ್ಷರಾಗಿ ಮಥುರಾಬಾಯಿ ಅವಿರೋಧ ಆಯ್ಕೆ

ಕಲಬುರಗಿ: ಆಳಂದ ತಾಲೂಕಿನ ಕಿಣ್ಣಿಸುಲ್ತಾನ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಎಸ್ಸಿ ಮೀಸಲು...

ಕಲಬುರಗಿ| ಕಳಪೆ ಬೀಜ, ನಕಲಿ ರಸಗೊಬ್ಬರ ಮಾರಾಟಗಾರರ ವಿರುದ್ಧ ಕೇಸ್: ಜಿಲ್ಲಾಧಿಕಾರಿ

ಕಲಬುರಗಿ: ಕಳಪೆ ಬೀಜ ಹಾಗೂ ನಕಲಿ ರಸಗೊಬ್ಬರ ಮಾರಾಟ ಕುರಿತಂತೆ ರೈತರಿಂದ...

ಕಲಬುರಗಿ| ವಿದ್ಯುತ್ ಪ್ರವಹಿಸಿ ಮಹಿಳೆ ಸಾವು

ಕಲಬುರಗಿ: ಮನೆ ಚಾವಣಿಯ ಮೇಲೆ ಒಣ ಹಾಕಿದ್ದ ಬಟ್ಟೆ ತೆಗೆಯಲು ತೆರಳಿದ...