ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತು ಶ್ವೇತ ಪತ್ರ ಹೊರಡಿಸುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

Date:

Share post:

ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13 ಸಾವಿರ ಕೋಟಿ ನೀಡಿ, ಅಭಿವೃದ್ಧಿ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ, ಎಲ್ಲಿ ಅಭಿವೃದ್ಧಿ ಆಗುತ್ತಿದೆ ಎನ್ನುವುದನ್ನು ರಾಜ್ಯ ಸರಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕಲಬುರಗಿಯ ಜಿಲ್ಲಾ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಸರಕಾರ ಗಂಭೀರವಾಗಿ ಪರಿಗಣಿಸಬೇಕು, ಕೆಕೆಆರ್ ಡಿಬಿ ಮೂಲಕ ಸಾಕಷ್ಟು ಪ್ರಮಾಣದ ಹಣವನ್ನು ಖರ್ಚು ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ಯಾದಗಿರಿಯಲ್ಲಿ ಹೇಳಿದ್ದಾರೆ, ಆ ಹಣ ಎಲ್ಲಿ ಖರ್ಚಾಗುತ್ತಿದೆ ಎಂದು ಸ್ಪಷ್ಟಪಡಿಸಲಿ ಎಂದು ಹೇಳಿದರು.

ಕಲಬುರಗಿ ಜಿಲ್ಲೆಯ ಸೇಡಂ, ಚಿತ್ತಾಪುರ ಈ ಭಾಗದಲ್ಲಿ ಮರಳು ಮಾಫಿಯಾ ಹೆಚ್ಚು ನಡೆಯುತ್ತಿದೆ. ಸುಮಾರು 165 ಕೋಟಿಗೂ ಹೆಚ್ಚು ಅಕ್ರಮ ಮರಳುಗಾರಿಕೆ ನಡೆದಿದೆ. ಈ ಬಗ್ಗೆ ಇಲ್ಲಿನ ಜಿಲ್ಲಾಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ, ರಾಜ್ಯ ಸರ್ಕಾರ ಕಂಡು ಕಾಣದೆ ಕುರುಡಾಗಿದೆ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ಎಸ್ಎಸ್ಎಲ್ ಸಿ ಫಲಿತಾಂಶ ನೋಡಿದರೆ ಸಂಪೂರ್ಣ ಕುಸಿದಿದೆ. ಇದರ ಬಗ್ಗೆ ಸರಕಾರ ಮುತುವರ್ಜಿ ವಹಿಸಬೇಕು, ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕೆಂದು ಹೇಳಿದರು.

 

‘ಜೆಡಿಎಸ್ ಪಕ್ಷದ ಜನರೊಂದಿಗೆ ಜನತಾದಳ’ ಅಭಿಯಾನ ಯಶಸ್ವಿಯಾಗಿ ಜರುಗುತ್ತಿದ್ದು, ಈ ವರೆಗೆ 4 ಲಕ್ಷ ಸದಸ್ಯರು ಮಿಸ್ಡ್ ಕಾಲ್ ಮೂಲಕ ನೋಂದಣಿಯಾಗಿದ್ದು, ಇದರಲ್ಲಿ 1 ಲಕ್ಷಕ್ಕೂ ಅಧಿಕ ಸಕ್ರಿಯ ಸದಸ್ಯರಾಗಿದ್ದಾರೆ ಎಂದು ಮಾಹಿತಿ ನೀಡಿದರು.

 

ರಾಜ್ಯವ್ಯಾಪ್ತಿ ಜನತಾದಳ ಸದಸ್ಯತ್ವ ನೋಂದಣಿ ಮಾಡಲಾಗ್ತಿದೆ. ನಾಲ್ಕು ಜಿಲ್ಲೆಗಳಲ್ಲಿ ಈಗಾಗಲೇ ಸಂಚಾರ ಮಾಡಿ ಜೆಡಿಎಸ್ ಸದಸ್ಯತ್ವ ನೋಂದಣಿ ನಡೆಯುತ್ತಿದೆ. ಈ ವರೆಗೆ 19 ವಿಧಾನಸಭೆ ಕ್ಷೇತ್ರದಲ್ಲಿ ಸಂಚಾರ ಮಾಡಲಾಗಿದೆ. ಇದು ಮೊದಲೇ ಹಂತದ ಪ್ರವಾಸವಾಗಿದ್ದು, 2ನೇ ಹಂತದಲ್ಲೂ ಸಂಚಾರ ಮಾಡುತ್ತೇವೆ ಎಂದು ಹೇಳಿದರು.

 

 

ಜೆಡಿಎಸ್ ಪಕ್ಷವನ್ನ ತಳಮಟ್ಟದಿಂದ ಕಟ್ಟುವ ಉದ್ದೇಶದಿಂದ ಜನರೊಂದಿಗೆ ಜನತಾದಳ ಪ್ರವಾಸ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉತ್ತರ, ದಕ್ಷಿಣದಲ್ಲಿ ನೋಂದಣಿ ಆಭಿಯಾನ ನಡೆಯುತ್ತೆ ಎಂದ ಅವರು, ಆಗಷ್ಟ್ 20 ನಂತರ ಹಳೇ ಮೈಸೂರು ಭಾಗದಲ್ಲಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿಯಲ್ಲಿ ಬೃಹತ್ ಸಮಾವೇಶ ನಡೆಸಲು ವರಿಷ್ಠರು ಚರ್ಚೆ ನಡೆಸಿದ್ದು, ಮುಂಬರುವ ದಿನಗಳಲ್ಲಿ ಈ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.

ಆಗಸ್ಟ್ ತಿಂಗಳ ಮೊದಲನೇ ಹಂತದ ಈ ಕಾರ್ಯಕ್ರಮ ಮುಗಿಯೋವರೆಗೆ 50 ಲಕ್ಷ ನೋಂದಣಿ ಗುರಿ ಇಟ್ಟುಕೊಂಡು ಹೋಗುತ್ತಿದ್ದೇವೆ. ಸದಸ್ಯತ್ವ ನೋಂದಣಿ ಮುಗಿದ ಬಳಿಕ ದೊಡ್ಡ ಮಟ್ಟದ ಸಮಾವೇಶ ಮಾಡಲಾಗುವುದು ಎಂದರು.

ಕುಮಾರಣ್ಣಾ ನೇತೃತ್ವದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಎದುರಿಸುತ್ತೇವೆ. ಯಾವುದೇ ಅನುಮಾನ ಇಲ್ಲದೆ ಮೈತ್ರಿಯೊಂದಿಗೆ ಚುನಾವಣೆ ಎದುರಿಸುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಮೈತ್ರಿ ವಿಚಾರಕ್ಕೆ ಮಾತನಾಡಿದ ಅವರು, ನಮ್ಮ ಹಾಗೂ ಬಿಜೆಪಿ ಮೈತ್ರಿ ಪರಸ್ಪರ ಪ್ರೀತಿ , ವಿಶ್ವಾಸದಿಂದ ಸಾಗುತ್ತಿದ್ದು ನಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಮಾಧ್ಯಮ ಮಿತ್ರರ ಪ್ರಶ್ನೆಗೆ ಉತ್ತರಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವೆಂಕಟರಾವ ನಾಡಗೌಡ, ಶಾಸಕರಾದ ಶರಣಗೌಡ ಪಾಟೀಲ್ ಕಂದಕೂರ. ಜೆಡಿಎಸ್ ಪಕ್ಷದ ಕಲಬುರಗಿ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ, ಮಾಜಿ ಸಚಿವರಾದ ನಾಡಗೌಡರು, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೊಳ, ಮುಖಂಡರಾದ ಶಿವಕುಮಾರ್ ನಾಟಿಕಾರ್, ಕೃಷ್ಣ ರೆಡ್ಡಿ, ಮಹೇಶ್ವರಿ ವಾಲಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...

ಕಲಬುರಗಿ| ವ್ಯಕ್ತಿಯನ್ನು ಕಿಡ್ನಾಪ್ ಮಾಡಿ ಹತ್ಯೆಗೈದು ನದಿಗೆ ಎಸೆದಿದ್ದ ಮೂವರ ಆರೋಪಿಗಳ ಬಂಧನ: ಪೊಲೀಸ್ ಕಮಿಷನರ್

ಕಲಬುರಗಿ: ವ್ಯಕ್ತಿಯೊಬ್ಬ ಕಾಣೆಯಾದ ಪ್ರಕರಣ ದಾಖಲಿಸಿಕೊಂಡ ಸ್ಟೇಶನ್ ಬಜಾರ್ ಪೊಲೀಸರು, ಕ್ಷೀಪ್ರ...