ಕಲಬುರಗಿ| ಜೇವರ್ಗಿ ಆಸ್ಪತ್ರೆಯ ಒಪಿಡಿ ಪುಸ್ತಕದಲ್ಲಿ ‘ಪೂಜಿಸಲೆಂದೇ ಹೂಗಳ ತಂದೆ’ ಗೀತೆ ಪ್ರತ್ಯಕ್ಷ

Date:

Share post:

ಕಲಬುರಗಿ: ಆಸ್ಪತ್ರೆಯ ಹೊರ ರೋಗಿಗಳ (ಒಪಿಡಿ) ದಾಖಲಾತಿ ಪುಸ್ತಕದಲ್ಲಿ ಆಸ್ಪತ್ರೆಯ ಸಿಬ್ಬಂದಿ ಸಿನೆಮಾದ ಭಕ್ತಿಗೀತೆ ಬರೆದಿರುವ ಬಗ್ಗೆ ಪ್ರತ್ಯಕ್ಷವಾಗಿರುವ ಘಟನೆ ಜೇವರ್ಗಿ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಜೇವರ್ಗಿ ತಾಲ್ಲೂಕಿನ ಮಾರಡಗಿ ಎಸ್.ಎ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಆಸ್ಪತ್ರೆಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಲು ಕಲಬುರಗಿ ಲೋಕಾಯುಕ್ತ ಎಸ್ಪಿ ಸಿದ್ದರಾಜು, ಡಿವೈಎಸ್‌ಪಿ ಗೀತಾ ಬೇನಾಳ ಅವರು ಭೇಟಿ ಕೊಟ್ಟಿದ್ದರು. ಇದೇ ವೇಳೆ ಆಸ್ಪತ್ರೆಯ ವ್ಯವಸ್ಥೆಯ ಕುರಿತು ಸಂಪೂರ್ಣವಾಗಿ ಪರಿಶೀಲಿಸುವ ವೇಳೆಯಲ್ಲೇ ದಾಖಲಾತಿ ಪುಸ್ತಕದಲ್ಲಿ ಭಕ್ತಿಗೀತೆ ಬರೆದಿರುವುದು ಕಂಡುಬಂದಿದ್ದು, ಇದನ್ನ ನೋಡಿದ ಲೋಕಾಯುಕ್ತ ಅಧಿಕಾರಿಗಳು ಶಾಕ್ ಆಗಿದ್ದಾರೆ.

ಒಪಿಡಿ ದಾಖಲಾತಿ ಪುಸ್ತಕದಲ್ಲಿ ‘ಎರಡು ಕನಸು’ ಚಲನಚಿತ್ರದ, ‘ಪೂಜಿಸಲೆಂದೇ ಹೂಗಳ ತಂದೆ ದರುಶನ ಕೋರಿ ನಾ ನಿಂದೇ ತೆರೆಯೋ ಬಾಗಿಲನು ರಾಮ… ಮೋಡದಮೇಲೆ ಚಿನ್ನದ ನೀರು ಚೆಲ್ಲುತ ಸಾಗಿದೆ ಹೊನ್ನಿನ ತೇರು ಮಾಣಿಕ್ಯದಾರತಿ ಉಷೆತಂದಿಹಳು…ತಾಮಸವೇಕಿನ್ನು ಸ್ವಾಮಿ, ತೆರೆಯೋ ಬಾಗಿಲನು, ರಾಮ…’ ಎಂದು ಇಡೀ ಹಾಡನ್ನೇ ಬರೆದಿದ್ದಾರೆ.

ಇನ್ನೊಂದು ಪುಟದಲ್ಲಿ ರೇಣುಕಾ ದೇವ್ಯಶ್ಟೋತ್ತರ ಮತ್ತಿತರ ಭಕ್ತಿಯ ಸ್ತೋತ್ರಗಳನ್ನು ಬರೆದಿರುವ ಬಗ್ಗೆಯೂ ಕಂಡುಬಂದಿದೆ.

ಆಸ್ಪತ್ರೆ ಸಿಬ್ಬಂದಿಯ ಈ ತರಹದ ಬರಹಕ್ಕೆ ಲೋಕಾಯುಕ್ತ ಎಸ್ಪಿ ಆಕ್ರೋಶ ವ್ಯಕ್ತಪಡಿಸಿದರು. ‘ಮಾಜಿ ಮುಖ್ಯಮಂತ್ರಿ ದಿ. ಧರ್ಮಸಿಂಗ್ ಕ್ಷೇತ್ರದ ಆಸ್ಪತ್ರೆನಾ ಇದು’ ಎಂದು ಅಲ್ಲಿನ ಸಿಬ್ಬಂದಿಯವರಿಗೆ ಪ್ರಶ್ನೆ ಮಾಡಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಕನಿಷ್ಠ ಬೆಂಬಲ ಬೆಲೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೋರಾಟ ಕೈಗೊಳ್ಳಲಿ: ಬಿ.ಆರ್.ಪಾಟೀಲ್ 

ಕಲಬುರಗಿ: 'ರಾಷ್ಟ್ರಮಟ್ಟದಲ್ಲಿ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಕಾಯ್ದೆ ಜಾರಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಕಲಬುರಗಿ| ಪಿ.ಇ.ಟಿ.ಸಿ ತರಬೇತಿ ಕೇಂದ್ರಕ್ಕೆ ಡಿ.ಸಿ. ಬಿ.ಫೌಜಿಯಾ ಭೇಟಿ

ಕಲಬುರಗಿ: ಕಲಬುರಗಿ ನಗರದ ಅಟಲ್‌ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಸಮಾಜ ಕಲ್ಯಾಣ...

ಕಲಬುರಗಿ| ಕುಶಲಕರ್ಮಿಗಳಿಗೆ ಒಂದು ದಿನದ ಕಾರ್ಯಾಗಾರಕ್ಕೆ ಡಿ.ಸಿ ಬಿ.ಫೌಜಿಯಾ ತರನ್ನುಮ್ ಚಾಲನೆ

ಕಲಬುರಗಿ: ಕರಕುಶಲ ವಸ್ತುಗಳನ್ನು ಉತ್ಪಾದಿಸುವುದರ ಜೊತೆಗೆ ಆ ಉತ್ಪನ್ನಗಳಿಗೆ ಮಾರುಕಟ್ಟೆ ಸೃಷ್ಟಿ...

ಕಲಬುರಗಿ| ರಾಷ್ಟ್ರೀಯ ಲೋಕ್ ಅದಾಲತ್‍ದಲ್ಲಿ 1,76,324 ಪ್ರಕರಣಗಳು ಇತ್ಯರ್ಥ

ಕಲಬುರಗಿ: ಗೌರವಾನ್ವಿತ ಉಚ್ಛ ನ್ಯಾಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ...