ಕಲಬುರಗಿ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತ ಮಳೆ ಸುರಿಯುತ್ತಿದ್ದು, ಒಂದಡೆ ಜನಜೀವನ ಅಸ್ತವ್ಯಸ್ತ ಆಗಿದೆ. ಮತ್ತೊಂದಡೆ ವಿದ್ಯಾರ್ಥಿಯೊಬ್ಬರು ಪ್ರಾಣದ ಹಂಗು ತೊರೆದು ಪರೀಕ್ಷೆ ಬರೆಯಲು ಉಕ್ಕಿ ಹರಿಯುತಿದ್ದ ನದಿ ದಾಟಿದ ಪ್ರಸಂಗ ನಡೆದಿದೆ.
ಜಿಲ್ಲೆಯ ಸೇಡಂ ತಾಲೂಕಿನ ಸಂಗಾವಿ (ಟಿ) ಗ್ರಾಮದ ಬಿಎ ಅಂತಿಮ ವರ್ಷದ ವಿಧ್ಯಾರ್ಥಿನಿ ರಾಣಿ ಪರೀಕ್ಷೆ ಬರೆಯಲು ತಂದೆಯ ಕೈಹಿಡಿದು ನದಿ ದಾಟಿದ್ದಾರೆ ಘಟನೆ ನಡೆದಿದ್ದು, ಪರೀಕ್ಷೆ ಬರೆಯಲು ಸೇಡಂ ಪಟ್ಟಣಕ್ಕೆ ಹೋಗುವಾಗ ವಿದ್ಯಾರ್ಥಿನಿಯ ತಂದೆ ಹೆಗಲಿಗೆ ಬ್ಯಾಗ್ ಹಾಕಿಕೊಂಡು ಮಗಳ ಕೈಹಿಡಿದು ಕಾಗಿಣಾ ನದಿ ದಾಟಲು ಹರಸಾಹಸ ಪಟ್ಟಿದ್ದಾರೆ.
ನಿರಂತರ ಮಳೆಯಿಂದ ವಿವಿಧಡೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಕಾಗಿಣ ನದಿ ನದಿಯು ಮೈದುಂಬಿ ಸೇತುವೆ ಮೇಲೆ ಸೊಂಟದ ಮಟ್ಟದವರೆಗೂ ನೀರು ಹರಿಯುತ್ತಿದ್ದರೂ, ಯುವತಿ ನದಿ ದಾಟಿದ ವಿಡಿಯೋ ವೈರಲ್ ಆಗಿದೆ.


