ಕಲಬುರಗಿ| ಪರೀಕ್ಷೆ ಬರೆಯಲು ತಂದೆಯ ಕೈ ಹಿಡಿದು ನದಿ ದಾಟಿದ ವಿದ್ಯಾರ್ಥಿ 

Date:

Share post:

ಕಲಬುರಗಿ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತ ಮಳೆ ಸುರಿಯುತ್ತಿದ್ದು, ಒಂದಡೆ ಜನಜೀವನ ಅಸ್ತವ್ಯಸ್ತ ಆಗಿದೆ. ಮತ್ತೊಂದಡೆ ವಿದ್ಯಾರ್ಥಿಯೊಬ್ಬರು ಪ್ರಾಣದ ಹಂಗು ತೊರೆದು ಪರೀಕ್ಷೆ ಬರೆಯಲು ಉಕ್ಕಿ ಹರಿಯುತಿದ್ದ ನದಿ ದಾಟಿದ ಪ್ರಸಂಗ ನಡೆದಿದೆ.

ಜಿಲ್ಲೆಯ ಸೇಡಂ ತಾಲೂಕಿನ ಸಂಗಾವಿ (ಟಿ) ಗ್ರಾಮದ ಬಿಎ ಅಂತಿಮ ವರ್ಷದ ವಿಧ್ಯಾರ್ಥಿನಿ ರಾಣಿ ಪರೀಕ್ಷೆ ಬರೆಯಲು ತಂದೆಯ ಕೈಹಿಡಿದು ನದಿ ದಾಟಿದ್ದಾರೆ ಘಟನೆ ನಡೆದಿದ್ದು, ಪರೀಕ್ಷೆ ಬರೆಯಲು ಸೇಡಂ ಪಟ್ಟಣಕ್ಕೆ ಹೋಗುವಾಗ ವಿದ್ಯಾರ್ಥಿನಿಯ ತಂದೆ ಹೆಗಲಿಗೆ ಬ್ಯಾಗ್ ಹಾಕಿಕೊಂಡು ಮಗಳ ಕೈಹಿಡಿದು ಕಾಗಿಣಾ ನದಿ ದಾಟಲು ಹರಸಾಹಸ ಪಟ್ಟಿದ್ದಾರೆ.

ನಿರಂತರ ಮಳೆಯಿಂದ ವಿವಿಧಡೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಕಾಗಿಣ ನದಿ ನದಿಯು ಮೈದುಂಬಿ ಸೇತುವೆ ಮೇಲೆ ಸೊಂಟದ ಮಟ್ಟದವರೆಗೂ ನೀರು ಹರಿಯುತ್ತಿದ್ದರೂ, ಯುವತಿ ನದಿ ದಾಟಿದ ವಿಡಿಯೋ ವೈರಲ್ ಆಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...