ಕಲಬುರಗಿ| ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ

Date:

Share post:

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಗ್ರಂಥಾಲಯ ಪಿತಾಮಹ ಡಾ. ಎಸ್ಆರ್ ರಂಗನಾಥ್ ರವರ 133ನೇ ಜನ್ಮದಿನ ಹಾಗೂ ಗ್ರಂಥಪಾಲಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ ಎಸ್ ಆರ್ ಪಾಟೀಲರು ಹಾಗೂ ಅತಿಥಿಗಳಾಗಿ ಶ್ರೀಮತಿ ಡಾ. ಭಾರತಿ ಹರಸೂರ ಶ್ರೀಮತಿ ಡಾ.ಶ್ರೀದೇವಿ ಸೋಮ ಪರೀಕ್ಷಾ ನಿಯಂತ್ರಣ ಅಧಿಕಾರಿಗಳು ಭಾಗವಹಿಸಿದ್ದರು. ಮುಖ್ಯ ಗ್ರಂಥಪಾಲಕರಾದ ಡಾ. ಮಲ್ಲಿಕಾರ್ಜುನ ವಡ್ಡನ ಕೇರಿ ಅವರು ಡಾ.ಎಸ್ ಆರ್ ರಂಗನಾಥನ್ ರವರ ಜೀವನ ಸಾಧನೆ ಹಾಗೂ ಗ್ರಂಥಾಲಯ ಶಿಕ್ಷಣವನ್ನು ವಿಶ್ವವಿದ್ಯಾಲಯಗಳಲ್ಲಿ,ಗ್ರಂಥಾಲಯ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅವರು ಪ್ರಯತ್ನವೇ ಕಾರಣವೆಂದು ನುಡಿದರು.

ಅತಿಥಿಗಳಾಗಿ ಭಾಗಿಯಾದ ಭಾರತಿ ಹರಸೂರ ತಮ್ಮ ನುಡಿಗಳಲ್ಲಿ ಗ್ರಂಥಾಲಯಗಳಲ್ಲಿರುವ ಮಾಹಿತಿ ಸಂಪನ್ಮೂಲಗಳನ್ನು ಪ್ರಕಟಿತ ಹಾಗೂ ಡಿಜಿಟಲ್ ಮಾಧ್ಯಮದ ಮುಖಾಂತರ ಓದುಗರ ಜ್ಞಾನ ಅಭಿವೃದ್ಧಿಗೆ ನಮ್ಮ ಕಾಲೇಜಿನ ಗ್ರಂಥಾಲಯದ ಸಿಬ್ಬಂದಿಯವರು ಬಹಳ ಕಾಳಜಿಯಿಂದ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಡಾ ಶ್ರೀದೇವಿ ಸೋಮ ರವರು ಭಾರತದಲ್ಲಿ ಗ್ರಂಥಾಲಯಗಳ ಬೆಳವಣಿಗೆಗೆ ಮತ್ತು ಗ್ರಂಥಾಲಯ ಶಿಕ್ಷಣವನ್ನು ದೊರಕಿಸುವಲ್ಲಿ ಡಾ ಎಸ್ ಆರ್ ರಂಗನಾಥನ್ ರವರ ಪಾತ್ರ ಅವಿಸ್ಮರಣೀಯವೆಂದು ನುಡಿದರು.

ಡಾ. ಎಸ್. ಆರ್.ಪಾಟೀಲರು ಕಾಲೇಜು ಶಿಕ್ಷಣ ವ್ಯವಸ್ಥೆಯಲ್ಲಿ ಗ್ರಂಥಾಲಯಗಳು ಓದುಗರ ಜ್ಞಾನಾರ್ಜನೆಗೆ ಮಹತ್ತರ ಪಾತ್ರ ವಹಿಸಿ,ಓದುಗನಿಗೆ ಬೇಕಾದ ಮಾಹಿತಿಯನ್ನು ತೀವ್ರಗತಿಯಲ್ಲಿ ಒದಗಿಸಿದಾಗ ಓದುಗ ಗ್ರಂಥಾಲಯದ ಸೇವೆಯನ್ನು ಪಡೆಯಲು ಹೆಚ್ಚಿನ ನೆರವನ್ನು ನೀಡಿದಂತಾಗುತ್ತದೆ. ವರ್ಷದಿಂದ ವರ್ಷಕ್ಕೆ ನಾವು ಓದುಗರ ಅಭಿರುಚಿಗೆ ತಕ್ಕಂತೆ ಗ್ರಂಥಗಳನ್ನು ಅವುಗಳು ಪ್ರಕಟಿತ ಮಾಧ್ಯಮದಲ್ಲಿರಲಿ ಅಥವಾ ಡಿಜಿಟಲ್ ಮಾಧ್ಯಮದಲ್ಲಿರಲಿ ಅವುಗಳನ್ನು ಖರೀದಿಸಲು ಗ್ರಂಥಾಲಯಕ್ಕೆ ಎಲ್ಲಾ ತರಹದ ಸಹಕಾರ ನೀಡುವದಾಗಿ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ತಿಳಿಯಬಯಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಗ್ರಂಥ ಪಾಲಕರಾದ ಡಾ.ಸಾವಿತ್ರಿ ಪಟ್ಟಣ ರವರು ಹಾಗೂ ವಂದನಾರ್ಪಣೆಯನ್ನು ಗ್ರಂಥ ಪಾಲಕರಾದ ಡಾ.ಮಮತಾ ಮೇಳಕುಂದಿರವರು ನಡೆಸಿಕೊಟ್ಟರು ಕಾರ್ಯಕ್ರಮದಲ್ಲಿ ವಿವಿಧ ವಿಭಾಗದ ಮುಖ್ಯಸ್ಥರು ಅಧ್ಯಾಪಕರು ವಿದ್ಯಾರ್ಥಿಗಳು ಹಾಗೂ ಗ್ರಂಥಾಲಯ ಸಿಬ್ಬಂದಿ ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...