ಕಲಬುರಗಿ| ವಿಷ ಸೇವಿಸಿ ರೈತ ಆತ್ಮಹತ್ಯೆ

Date:

Share post:

ಕಲಬುರಗಿ: ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೆ ವಿಷ ಸೇವಿಸಿ ಆತ್ಮ ಹತ್ಯೆಗೆ ಶರಣಾದ ಘಟನೆ ಜೇವರ್ಗಿ ತಾಲ್ಲೂಕಿನ ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯ ಅಂಕಲಗಾ ಗ್ರಾಮದ ತಾಂಡಾದಲ್ಲಿ ನಡೆದಿದೆ.

ಅಂಕಲಗಾ ತಾಂಡಾದ ನಿವಾಸಿ ಲಕ್ಷ್ಮಣ ಸೋಮುಲು ರಾಠೋಡ (65) ಮೃತ ರೈತರೆಂದು ಎಂದು ಗುರುತಿಸಲಾಗಿದೆ.

ಮೂರು ದಿನಗಳ ಹಿಂದೆ ವಿಷ ಸೇವನೆ ಮಾಡಿದ ರೈತನನ್ನು ಕಲಬುರ್ಗಿಯ ಜಿಮ್ಸ್ ಆಸ್ಪತ್ರೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

2ಎಕರೆ 10 ಗುಂಟೆ ಹೊಂದಿದ ಮೃತ ರೈತನ ಹೆಸರಿನಲ್ಲಿ ಪ್ರಗತಿ ಕೃಷ್ಣಾ ಬ್ಯಾಂಕ್‌ನಲ್ಲಿ 2 ಲಕ್ಷ, ಇಟಗಾ ಸಹಕಾರಿ ಬ್ಯಾಂಕ್ ನಲ್ಲಿ 50 ಸಾವಿರ ರೂ. ಸೇರಿದಂತೆ ಖಾಸಗಿಯಾಗಿ 6 ಲಕ್ಷ ರೂ. ಸಾಲವಿತ್ತು ಎಂದು ಮೂಲಗಳು ತಿಳಿಸಿವೆ.

ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...