ಕಲಬುರಗಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Date:

Share post:

ಕಲಬುರಗಿ: ಆಳಂದ ತಾಲೂಕಿನ ತಡಕಲ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ಪ್ರಕ್ರಿಯೆ ಇತ್ತೀಚಿಗೆ ಜರುಗಿತು.

ನೇಮಕ ಪ್ರಕ್ರಿಯೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದೊoದೆ ನಾಮಪತ್ರಗಳು ಸಲ್ಲಿಕೆಯಾಗಿರುವುದರಿಂದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ಜರುಗಿತು.

ಇತ್ತೀಚಿಗೆ ಜರುಗಿದ ಚುನಾವಣೆಯಲ್ಲಿ 12 ನಿರ್ದೇಶಕ ಸ್ಥಾನಗಳಲ್ಲಿ ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಬೆಂಬಲಿತ 11 ಜನ ನಿರ್ದೇಶಕರು ಬಹುಮತದಿಂದ ಆಯ್ಕೆಯಾಗಿದ್ದರು.

ನೂತನ ಅಧ್ಯಕ್ಷರಾಗಿ ಚಂದ್ರಕಾoತ ಶಿರೋಳೆ, ಉಪಾಧ್ಯಕ್ಷರಾಗಿ ಅಂಕುಶ ಮೈಂದೆ ಆಯ್ಕೆಯಾದರು. ನಂತರ ವಿಜಯೋತ್ಸದ ಜರುಗಿತು. ವಿಜಯೋತ್ಸವದಲ್ಲಿ ಮುಖಂಡರಾದ ಶಿವಪುತ್ರಪ್ಪ ಬೆಳ್ಳೆ, ತಿಪ್ಪಯ್ಯ ಗುತ್ತೇದಾರ, ಮಲ್ಲಿಕಾರ್ಜುನ ಮಾನೋಳೆ, ಅನೀಲ ಜಮಾದಾರ ಸೇರಿದಂತೆ ಪ್ರಮುಖರು ಹಾಗೂ ನೂತನ ನಿರ್ದೇಶಕರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...