ಕಲಬುರಗಿ| ವಿದ್ಯಾರ್ಥಿನಿಯರ ಪ್ರತಿಭೆ ಪ್ರೋತ್ಸಾಹಿಸಲು ಗೋಡೆ ಪತ್ರಿಕೆ ಸಹಕಾರಿ: ಡಾ. ಸತ್ಯಂಪೇಟೆ

Date:

Share post:

ಕಲಬುರಗಿ: ಇಂದಿನ ಆಧುನಿಕ ಯುಗದಲ್ಲಿ ಎಲ್ಲ ವಿದ್ಯಾರ್ಥಿಗಳು ಕೇವಲ ಮೊಬೈಲ್ ವಶಕ್ಕೆ ಸಿಲುಕಿದ್ದಾರೆ, ಇಂತಹ ಸಂದರ್ಭದಲ್ಲಿ ಕಾಲೇಜಿನ ಗೋಡೆ ಪತ್ರಿಕೆ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸಹಕಾರಿ ಎಂದು ಸಾಹಿತಿ ಡಾ. ಶಿವರಂಜನ ಸತ್ಯಂಪೇಟೆ ಹೇಳಿದರು.

ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ ವಿಭಾಗದವರು ಸಂಚಾಲಿತ “ಮುಕ್ತ ಮನಸು” ಗೋಡೆ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ಮುಂದುವರೆದು ಮಾತನಾಡುತ್ತಾ, ಕನ್ನಡ ವಿಭಾಗದವರು ಈ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರಲು ಈ ತರಹದ ಪ್ರಯೋಗ ಮಾಡುತ್ತಿರುವುದು ಶ್ಲಾಘನೀಯ ಎಂದರು.

ನಮ್ಮ ಕಾಲೇಜಿನಲ್ಲಿ ಈ ರೀತಿಯ ಪ್ರಯೋಗ ಮೊದಲು ಹಿಂದಿ ವಿಭಾಗದ ವತಿಯಿಂದ ಆರಂಭಿಸಲಾಯಿತು. ಅವರಿಂದ ಪ್ರೋತ್ಸಾಹ ಪಡೆದು ಕನ್ನಡ ವಿಭಾಗದವರು ಮುಕ್ತ ಮನಸು ಗೋಡೆ ಪತ್ರಿಕೆ ಆರಂಭಿಸಿರುವುದು ವಿದ್ಯಾರ್ಥಿಗಳ ಸರ್ವೋತಮುಖ ಬೆಳವಣಿಗೆಗೆ ಸಹಕಾರಿ ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಕಾಲೇಜಿನ ಪ್ರಾಚಾರ್ಯರಾದ ಡಾ.ರಾಜೇಂದ್ರ ಕೊಂಡಾ ತಿಳಿಸಿದರು.

 

ಕನ್ನಡ ವಿಭಾಗದ ಮುಖ್ಯಸ್ಥರಾದ ಕವಿತಾ ಅಶೋಕ ಅವರು ಅತಿಥಿಗಳಿಗೆ ಸ್ವಾಗತ ಮಾಡಿದರು. ಬಸಮ್ಮ ಗೊಬ್ಬರ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ದಾನಮ್ಮ ಕೋರವಾರ ಅವರು ವಂದಿಸಿದರು.

 

ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಚಾರ್ಯರಾದ ಪ್ರೊ. ವೀಣಾ ಎಚ್. ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ.ಪ್ರೇಮಚಂದ ಚವ್ಹಾಣ, ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಮಹೇಶ ಗಂವ್ಹಾರ, ಆಯಿಕ್ಯೂಎಸಿ ಸಂಯೋಜಕರಾದ ಡಾ. ಶಿವರಾಜ ಜಿ., ಡಾ. ಜ್ಯೋತಿಪ್ರಕಾಶ ದೇಶಮುಖ, ಡಾ.ಸವಿತಾ, ಶಿವಲೀಲಾ ಧೋತ್ರ, ಡಾ. ಮೋಹಸೀನಾ, ಸುಷ್ಮಾ ಕುಲಕರ್ಣಿ, ಡಾ. ರಾಜೇಶ, ಗೀತಾ ಪಾಟೀಲ, ವಿವಿಧ ವಿಭಾಗಗಳ ಉಪನ್ಯಾಸಕರು ಮತ್ತು ಕನ್ನಡ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...