ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Date:

Share post:

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಸುಮಾರು 3 ಎಕರೆ ಜಮೀನು ಹೊಂದಿರುವ ರೈತ ಬೆಳೆ ಸಾಲ ಮಾಡಿಕೊಂಡಿದ್ದ. ಆದರೆ ಬೆಳೆ ಮಳೆಯಿಂದ ನಷ್ಟವಾಗಿದೆ.

ಫರಹತಾಬಾದ್ ಹೋಬಳಿ ವ್ಯಾಪ್ತಿಯ ಕವಲಗಾ ಬಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿ ಹಣಮಂತ ತಂದೆ ಬಸವರಾಜ ಮೊಸಂಡಿ (35) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ.

ರೈತ 3 ಎಕರೆ ಜಮೀನು ಹೊಂದಿದ್ದು, ಫರಹತಬಾದ್ ಬ್ಯಾಂಕ್ ಆಫ್ ಬರೋಡ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ 2 ಲಕ್ಷ ರೂ. ಬೆಳೆ ಸಾಲ ಮಾಡಿದ್ದ. ಕೃಷಿಗಾಗಿ ಖಾಸಗಿ ಸಾಲ 35,0000 ಸೇರಿ ಒಟ್ಟು ಏಳುವರೆ ಲಕ್ಷ ಸಾಲ ಮಾಡಿಕೊಂಡಿದ್ದ.

ಸದ್ಯ ಹತ್ತಿ ಮತ್ತು ತೊಗರಿ ಬೆಳೆದಿದ್ದ. ಆದರೆ ಅತಿಯಾದ ಮಳೆ ನೀರಿನಿಂದ ಬೆಳೆ ಕೊಚ್ಚಿಕೊಂಡು ಹೋಗಿದೆ. ಆದ್ದರಿಂದ ಬಾವಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ರೈತ ಒಂದು ಗಂಡು ಮಗು, ಪತ್ನಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಫರಹತಬಾದ್ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಪರಿಶೀಲನೆ ಕಾರ್ಯ ನಡೆಯುತ್ತಿದೆ.

ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮ್ಮಶೆಟ್ಟಿ, ರಾಯಪ್ಪ ಹುರಮುಂಜಿ ಆಗ್ರಹಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...