ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

Date:

Share post:

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ ಮತಕ್ಷೇತ್ರದ ಗ್ರಾಮಗಳಲ್ಲಿ ನಿರಂತರ ಧಾರಾಕಾರ ಮಳೆಯ ಪರಿಣಾಮವಾಗಿ ಸಾಕಷ್ಟು ಬೆಳೆ ಹಾನಿ ಸಂಭವಿಸಿದೆ. ಈ ವ್ಯಾಪ್ತಿಯನ್ನು ಅತೀವೃಷ್ಟಿ ಪೀಡಿತ ಪ್ರದೇಶ ಎಂದು ಘೋಷಿಸಬೇಕೆಂದು ಕೋಟನೂರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಲ್ಲಿನಾಥ ನಾಗನಹಳ್ಳಿ ಆಗ್ರಹಿಸಿದ್ದಾರೆ.

ಈ ಪ್ರದೇಶದಲ್ಲಿ ಸುರಿದ ಭಾರೀ ಮಳೆಯ ಪ್ರಮಾಣದಿಂದಾಗಿ ಸೋಯಾಬೀನ್, ಉದ್ದು, ಹೆಸರು, ಜೋಳ, ಹತ್ತಿ ಮುಂತಾದ ಪ್ರಮುಖ ಕೃಷಿ ಬೆಳೆಗಳು ನೀರುಪಾಲಾಗಿ ಸಾವಿರಾರು ಹೆಕ್ಟೇರ್ ಭೂಮಿಯು ಹಾನಿಗೊಳಗಾಗಿದ್ದು, ರೈತರ ಜೀವನ ಭವಿಷ್ಯ ಗೊಂದಲಕ್ಕೆ ಒಳಗಾಗಿದೆ. ಕೂಡಲೇ ರೈತರ ಪರ ಸರ್ಕಾರ ಧಾವಿಸಲಿ ಎಂದು ಒತ್ತಾಯಿಸಿದ್ದಾರೆ.

ರೈತರು ವಿವಿಧ ಮೂಲಗಳಿಂದ ಸಾಲ ತೆಗೆದುಕೊಂಡು ಜಮೀನುಗಳಲ್ಲಿ ಬೀಜ, ರಸಗೊಬ್ಬರ ಸೇರಿದಂತೆ ಮತ್ತಿತರ ಸಾಮಗ್ರಿಗಳನ್ನು ಖರೀದಿಸಿ, ಬಿತ್ತನೆ ಹಾಕಿದ್ದಾರೆ, ಆದರೆ ಏಕಾಏಕಿ ಮಳೆ ನಿರಂತರ ಸುರಿಯುತ್ತಿರುವುದರಿಂದ ಬೆಳೆ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....

ಕಲಬುರಗಿ| ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಜಯ; ಕೈ ತೆಕ್ಕೆಗೆ ಕಾಳಗಿ ಪಟ್ಟಣ ಪಂಚಾಯತ್ 

ಕಲಬುರಗಿ: ಕಾಳಗಿ ಪಟ್ಟಣ ಪಂಚಾಯತ್ ನ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ 11...