ಕಲಬುರಗಿ| ಸಿಎಂ ಸಿದ್ದರಾಮಯ್ಯಗೆ ಅವಹೇಳನ ಆರೋಪ; ಪಿಡಿಓ ವಿರುದ್ಧ ಎಫ್ಐಆರ್ ದಾಖಲು 

Date:

Share post:

ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರಿಗೆ ‘ಸಿದ್ರಾಮುಲ್ಲಾ’ ಎಂದು ಅವಹೇಳನಕಾರಿಯಾಗಿ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿರುವ ಆರೋಪದ ಮೇರೆಗೆ ಪಿಡಿಓ ವೊಬ್ಬರ ವಿರುದ್ಧ ಆಳಂದ ತಾಲ್ಲೂಕಿನ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಬೆಳಗ್ಗೆ ಪ್ರಕರಣ ದಾಖಲಾಗಿದೆ.

ಆಳಂದ ತಾಲ್ಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಪಿಡಿಒ ಪ್ರವೀಣಕುಮಾ‌ರ್ ಉಡಗಿ ವಿರುದ್ಧವೇ ಅದೇ ಗ್ರಾಮದ ಮುಖಂಡ ಮಲ್ಲಿಕಾರ್ಜುನ ದಣ್ಣೂರ ಎಂಬಾತರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಆಗಸ್ಟ್ 21ರಂದು ಆರೋಪಿ ಆಗಿರುವ ಪಿಡಿಓ ಪ್ರವೀಣಕುಮಾರ್ ತಮ್ಮ ಮೊಬೈಲ್ ನಲ್ಲಿ ‘ಸಿದ್ರಾಮುಲ್ಲಾ’ ಎಂದು ಬರೆಯುವುದರ ಜೊತೆಗೆ ಸಿದ್ದರಾಮಯ್ಯ ಅವರ ತಲೆಗೆ ಮುಸ್ಲಿಮರು ಧರಿಸುವ ಟೊಪ್ಪಿಗೆ ಹಾಕಿರುವಂತೆ ಎಡಿಟ್‌ ಮಾಡಲಾದ ಚಿತ್ರವನ್ನು ಸ್ಟೇಟಸ್ ಇಟ್ಟುಕೊಂಡಿದ್ದರು. ಚಿತ್ರದಲ್ಲಿ ‘ಸಿದ್ರಾಮುಲ್ಲಾನ ಬಜೆಟ್ ನಲ್ಲಿ ಕೃಷಿಕರಿಗೆ ಬೆಲೆನೇ ಇಲ್ವಾ? ರೈತರ ಕಷ್ಟ ಹಾಗೂ ನಷ್ಟಗಳಿಗಿಂತ ಮುಸ್ಲಿಂ ಕಾಂಟ್ರಾಕ್ಟರ್ ಮಹತ್ವದ್ದಾಗಿದೆ’ ಎಂದು ಬರೆದುಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಪಿಡಿಓ ಪ್ರವೀಣಕುಮಾರ್ ವಿರುದ್ಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ: ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಚರ್ಮ ಕ್ಯಾನ್ಸರ್ ಜಾಗೃತಿ ಶಿಬಿರ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಖ್ವಾಜಾ ಬಂದಾ ನವಾಜ್ ದರ್ಗಾದ 622ನೇ ಅದ್ಧೂರಿ ಸಂದಲ್ ಮೆರವಣಿಗೆ

ಕಲಬುರಗಿ, ಮೇ 3: ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರ ಹಾಗೂ...

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...