ಕಲಬುರಗಿ| ಹಿರಿಯ ಪತ್ರಕರ್ತ ಗೋವಿಂದರಾವ ಖಮಿತಕರ್ ನಿಧನ

Date:

Share post:

ಕಲಬುರಗಿ: ಇಲ್ಲಿನ ‘ವಾಣಿಸಾಮ್ರಾಟ’ ಮತ್ತು ‘ವೃತ್ತಮಂಜರಿ’ ಪತ್ರಿಕೆಗಳ ಸಂಪಾದಕರಾದ ಗೋವಿಂದರಾವ ಖಮಿತಕರ್ (86) ಅವರು ವಯೋಸಹಜದಿಂದ ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದರು.

ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.

ಶುಕ್ರವಾರ ಮಧ್ಯಾಹ್ನ ನಗರದ ಚಿತ್ತಾರಿ ಅಡ್ಡಾದ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮದಲ್ಲಿ ತಮ್ಮದೇ ರೀತಿಯಲ್ಲಿ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಾಗಿದ್ದರು.

ಕಷ್ಟದ ಕಾಲದಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಏಕೈಕ ಹಿಂದಿ ಪತ್ರಿಕೆಯನ್ನು ಆರಂಭಿಸಿ ನೀರಾವರಿ, ಶೈಕ್ಷಣಿಕ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಲೇಖನ ಬರೆಯುವ ಮೂಲಕ ಶ್ರಮಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...