ಕಲಬುರಗಿ: ಮದ್ದೂರು ಚಲೋ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ದ ತೀವ್ರ ವಾಗ್ಧಾಳಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ವಿದೇಶದಲ್ಲಿರುವ ತಮ್ಮ ತಮ್ಮ ಮಕ್ಕಳನ್ನು ವಾಪಸ್ ಕರೆಸಿ ಮದ್ದೂರಿನ ಬೀದಿಗಿಳಿಸಲಿ ಎಂದು ಸವಾಲು ಹಾಕಿದ್ದಾರೆ.
ಬಿಜೆಪಿ ನಾಯಕರು ಈಗ ಮಂಗಳೂರಿನಿಂದ ಮದ್ದೂರಿಗೆ ಶಿಫ್ಟ್ ಆಗಿದ್ದಾರೆ ಎಂದು ಟೀಕಿಸಿದ ಸಚಿವರು ಅವರಿಗೆ ಈಗ ಮಾಡಲು ಏನೂ ಕೆಲಸವಿಲ್ಲ. ಹಾಗಾಗಿ ಇದೆಲ್ಲ ಮಾಡುತ್ತಿದ್ದಾರೆ. ಮದ್ದೂರು ಘಟನೆಗೆ ಸಂಬಂಧಿಸಿದಂತೆ 22 ಜನರನ್ನು ಅರೆಸ್ಟ್ ಮಾಡಲಾಗಿದೆ. ತನಿಖೆ ನಡೆಯುತ್ತಿದೆ. ಶಾಂತಿ ಸಭೆ ಕರೆಯಲಾಗಿತ್ತು. ಆ ಸಭೆಯಲ್ಲಿ ಯಾಕೆ ಬಿಜೆಪಿ ನಾಯಕರು ಭಾಗವಹಿಸಲಿಲ್ಲ ? ಎಂದು ಪ್ರಶ್ನಿಸಿದರು.
ಭದ್ರಾವತಿ ಶಾಸಕ ಸಂಗಮೇಶ್ ಹೇಳಿಕೆ 20 ವರ್ಷ ಹಿಂದಿನದು ಎಂದು ಅವರೇ ಹೇಳಿದ್ದಾರೆ. ಸಂಗಮೇಶ್ ಬಗ್ಗೆ ಮಾತಮಾಡುವ ಬಿಜೆಪಿ ನಾಯಕರು ಈ ಹಿಂದೆ ಇದೇ ತರ ಹೇಳಿಕೆ ನೀಡಿದ್ದ ದೇವೇಗೌಡ ಹಾಗೂ ಕುಮಾರಸ್ವಾಮಿ ಬಗ್ಗೆ ಏನು ಹೇಳುತ್ತಾರೆ ಎಂದು ತಿರುಗೇಟು ನೀಡಿದರು.
ಕಡಗಂಚಿಯ ಕೇಂದ್ರೀಯ ವಿದ್ಯಾಲಯ ಆರ್ ಎಸ್ ಎಸ್ ಶಾಖಾ ಕಚೇರಿಯಾಗಿದೆ. ವಿವಿ ಕಟ್ಟಲು ಜಾಗ ಕೊಟ್ಟಿರುವುದು ನಾವು, ಆದರೆ, ನಮ್ಮನ್ನೇ ವಿವಿ ವ್ಯಾಪ್ತಿಯಿಂದ ಹೊರಗಡೆ ಇಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.


