ಕಲಬುರಗಿ| ಬಿಜೆಪಿಗರು ತಮ್ಮ ಮಕ್ಕಳನ್ನು ವಾಪಸ್ ಕರೆಸಿ, ಮದ್ದೂರು ಚಲೋ ಮಾಡಲಿ: ಪ್ರಿಯಾಂಕ್ ಖರ್ಗೆ ಸವಾಲ್

Date:

Share post:

ಕಲಬುರಗಿ: ಮದ್ದೂರು ಚಲೋ‌ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ದ ತೀವ್ರ ವಾಗ್ಧಾಳಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ವಿದೇಶದಲ್ಲಿರುವ ತಮ್ಮ ತಮ್ಮ ಮಕ್ಕಳನ್ನು ವಾಪಸ್ ಕರೆಸಿ ಮದ್ದೂರಿನ ಬೀದಿಗಿಳಿಸಲಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿ ನಾಯಕರು ಈಗ ಮಂಗಳೂರಿನಿಂದ ಮದ್ದೂರಿಗೆ ಶಿಫ್ಟ್ ಆಗಿದ್ದಾರೆ ಎಂದು ಟೀಕಿಸಿದ ಸಚಿವರು ಅವರಿಗೆ ಈಗ ಮಾಡಲು ಏನೂ ಕೆಲಸವಿಲ್ಲ. ಹಾಗಾಗಿ ಇದೆಲ್ಲ ಮಾಡುತ್ತಿದ್ದಾರೆ. ಮದ್ದೂರು ಘಟನೆಗೆ ಸಂಬಂಧಿಸಿದಂತೆ 22 ಜನರನ್ನು ಅರೆಸ್ಟ್ ಮಾಡಲಾಗಿದೆ. ತನಿಖೆ ನಡೆಯುತ್ತಿದೆ. ಶಾಂತಿ ಸಭೆ ಕರೆಯಲಾಗಿತ್ತು. ಆ ಸಭೆಯಲ್ಲಿ ಯಾಕೆ‌ ಬಿಜೆಪಿ ನಾಯಕರು ಭಾಗವಹಿಸಲಿಲ್ಲ ? ಎಂದು ಪ್ರಶ್ನಿಸಿದರು.

ಭದ್ರಾವತಿ ಶಾಸಕ ಸಂಗಮೇಶ್ ಹೇಳಿಕೆ‌ 20 ವರ್ಷ ಹಿಂದಿನದು ಎಂದು ಅವರೇ ಹೇಳಿದ್ದಾರೆ. ಸಂಗಮೇಶ್ ಬಗ್ಗೆ ಮಾತಮಾಡುವ ಬಿಜೆಪಿ ನಾಯಕರು ಈ ಹಿಂದೆ ಇದೇ ತರ ಹೇಳಿಕೆ ನೀಡಿದ್ದ ದೇವೇಗೌಡ ಹಾಗೂ ಕುಮಾರಸ್ವಾಮಿ ಬಗ್ಗೆ ಏನು ಹೇಳುತ್ತಾರೆ ಎಂದು ತಿರುಗೇಟು ನೀಡಿದರು.

ಕಡಗಂಚಿಯ ಕೇಂದ್ರೀಯ ವಿದ್ಯಾಲಯ ಆರ್ ಎಸ್ ಎಸ್ ಶಾಖಾ ಕಚೇರಿಯಾಗಿದೆ. ವಿವಿ ಕಟ್ಟಲು ಜಾಗ ಕೊಟ್ಟಿರುವುದು ನಾವು, ಆದರೆ, ನಮ್ಮನ್ನೇ ವಿವಿ ವ್ಯಾಪ್ತಿಯಿಂದ ಹೊರಗಡೆ ಇಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...