ಕಲಬುರಗಿ| ಸೆ.16ರಂದು ಹಿಂದು ಮಹಾಗಣಪತಿ ಅದ್ಧೂರಿ ಶೋಭಾಯಾತ್ರೆ, ವಿಸರ್ಜನೆ

Date:

Share post:

ಕಲಬುರಗಿ: ಸೆ.16ರಂದು ಬೆಳಿಗ್ಗೆ ನಗರದ ಐತಿಹಾಸಿಕ ಕೋಟೆಯ ಮುಂಭಾಗದಲ್ಲಿ ಹಿಂದು ಮಹಾಗಣಪತಿ ಸಮಿತಿಯಿಂದ ಪ್ರತಿಷ್ಟಾಪನೆ ಮಾಡಲಾದ 21 ದಿನಗಳ ಹಿಂದು ಮಹಾಗಣಪತಿಯ ಅದ್ಧೂರಿ ಶೋಭಾಯಾತ್ರೆ ಹಾಗೂ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಗಂಗಾ, ಕಾರ್ಯದರ್ಶಿ ಶ್ರೀಮಂತ ರಾಜು ನವಲದಿ ಜಂಟಿಯಾಗಿ ತಿಳಿಸಿದರು.

ನಗರದ ಕೋಟೆಯ ಮುಂಭಾಗದಲ್ಲಿ ಶನಿವಾರ ಸಮಿತಿಯಿಂದ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಹಿಂದು ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅದ್ಧೂರಿ ಶೋಭಾಯಾತ್ರೆಯೂ ಕೋಟೆಯಿಂದ ಪ್ರಾರಂಭವಾಗಿ ನಗರದ ಪ್ರಕಾಶ್ ಏಶಿಯನ್ ಮಾಲ್, ಹುಮನಾಬಾದ್ ಬೇಸ್, ಚೌಕ್ ಪೋಲಿಸ್ ಠಾಣೆ,ಸುಪರ್ ಮಾರ್ಕೇಟ್, ಜಗತ್ ವೃತ್ತ,ಸಂಗೋಳ್ಳಿ ರಾಯಣ್ಣನ ವೃತ್ತದಿಂದ ಅಪ್ಪನ ಕೆರೆಯಲ್ಲಿ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ ಎಂದರು.

21 ದಿನಗಳ ಕಾಲದ ಗಣೇಶೋತ್ಸವದಲ್ಲಿ ಪಂಚ್ ಪರಿವರ್ತನೆ ಕುರಿತು ಜಾಗೃತಿ ಮೂಡಿಸಲಾಗಿದ್ದು, ಕಲಿಕಾ ಕೇಂದ್ರದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಸಂಗೀತ, ಭರತನಾಟ್ಯ,ಕೊಳಲು ವಾದನ,ಭಜನೆ,ತಬಲಾ ವಾದನ ಸೇರಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.ಸೆ.16ರ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಹಿಂದು ಮಹಾಗಣಪತಿಯ ಅದ್ಧೂರಿ ಶೋಭಾಯಾತ್ರೆಗೆ ದೇಶಿ ವಾದ್ಯಗಳಾದ ನಾಸಿಕ್ ಡೋಲು,ಪರಳಿಯ ಡೋಲ್ ತಾಷಾ,ಸಿಂದಗಿ ಚಿಟ್ಟಲಗಿ, ಸ್ಥಳೀಯ ಡೋಳ್ಳು,ಹಲಗಿ ಭಜನೆ ಶೋಭಾಯಾತ್ರೆಗೆ ಮತ್ತಷ್ಟು ಮೆರಗು ನೀಡಲಿವೆ ಎಂದು ಸಮಿತಿಯ ಕಾರ್ಯದರ್ಶಿ ರಾಜು ಶ್ರೀಮಂತ ನವಲದಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಿಂದು ಮಹಾಗಣಪತಿ ಸಮಿತಿಯ ಉಪಾಧ್ಯಕ್ಷರಾದ,ಕೆಕೆಸಿಸಿಐ ಅಧ್ಯಕ್ಷ ಶರಣು ಪಪ್ಪಾ,ಜಗದೀಶ್ ಕಟ್ಟಿಮನಿ,ಸಿದ್ದರಾಜ ಬಿರಾದಾರ್,ಸಹ ಕಾರ್ಯದರ್ಶಿ ಸಂತೋಷ್ ಕಾಮತ್, ಡಾ.ಚರಣ ಹೊನ್ನಳ್ಳಿ, ಕೋಶಾಧ್ಯಕ್ಷ ಶ್ರೀಶೈಲ ಮೂಲಗೆ, ಸದಸ್ಯರಾದ ಸಿದ್ಧಯ್ಯ ಸ್ವಾಮಿ,ನಾಗಯ್ಯ ಸ್ವಾಮಿ, ದೀಪಕ್ ಪವಾರ್, ಸಂಜು ರೇವಣಕರ್ , ಶಿವರಾಜ್ ಸಂಗೋಳಗಿ ಸೇರಿದಂತೆ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...