ಕಲಬುರಗಿ| ಗೋದುತಾಯಿ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ವರ್ಚುವಲ್ ಎಫ್‌ಡಿಪಿ

Date:

Share post:

ಕಲಬುರಗಿ : ಸಂಶೋಧನಾ ಲೇಖನ ಎಂದರೆ ಒಂದು ನಿರ್ದಿಷ್ಟ ಅಧ್ಯಯನದ ಹೊಸ ಆವಿಷ್ಕಾರಗಳು, ಫಲಿತಾಂಶಗಳು ಮತ್ತು ಮಹತ್ವವನ್ನು ವಿವರಿಸುವ ವೈಜ್ಞಾನಿಕ ವರದಿ ಎಂದು ಬೆಂಗಳೂರಿನ ದಯಾನಂದ ಸಾಗರ ತಾಂತ್ರಿಕ ಮಹಾವಿದ್ಯಾಲಯದ ಡಾ.ಎಂ.ಪ್ರೇಮಕುಮಾರ ಹೇಳಿದರು.

ಗೋದುತಾಯಿ ದೊಡ್ಡಪ್ಪ ಅಪ್ಪ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಗುರುವಾರ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯ ಐಕ್ಯೂಎಸಿ ಮತ್ತು ಐಓಟಿ ಅಕಾಡೆಮಿ ಕೊಯಿಮತ್ತೂರ ಇವರ ಸಂಯುಕ್ತಾಶ್ರಯದಲ್ಲಿ ‘ಸಂಶೋಧನ ಪ್ರಬಂಧ ಬರೆಯುವ ಒಂದು ವ್ಯವಸ್ಥಿತ ವಿಧಾನ’ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ವರ್ಚುವಲ್ ಎಫ್‌ಡಿಪಿ (ಅಧ್ಯಾಪಕರ ಪುನಶ್ಚೇತನ ಕಾರ್ಯಕ್ರಮ)ಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಸಂಶೋಧನಾ ಲೇಖನವು ಸಂಶೋಧನಾ ವಿಧಾನಗಳು, ಫಲಿತಾಂಶಗಳು, ಚರ್ಚೆ ಮತ್ತು ತೀರ್ಮಾನದಂತಹ ಪ್ರಮಾಣಿತ ವಿಭಾಗಗಳನ್ನು ಒಳಗೊಂಡಿರುತ್ತದೆ, ಓದುಗರಿಗೆ ಅಧ್ಯಯನದ ಪ್ರಕ್ರಿಯೆಯನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಈ ಲೇಖನಗಳು ಜರ್ನಲ್‌ಗಳಲ್ಲಿ ಪ್ರಕಟಿತವಾಗಿದ್ದು, ಹೊಸ ಜ್ಞಾನವನ್ನು ನೀಡುವ ಪ್ರಾಥಮಿಕ ಸಾಹಿತ್ಯದ ಒಂದು ರೂಪವಾಗಿದೆ. ಸಂಶೋಧನಾ ಅರಿವು, ಸಂಶೋಧನಗಾಗಿ ಎಐ ಪರಿಕರಗಳು, ಮಾರ್ಗಸೂಚಿಗಳು, ಅದರ ಪ್ರಾಮುಖ್ಯತೆ ತಿಳಿಸಿದರು.

ಮಹಾವಿದ್ಯಾಲಯ ಪ್ರಾಚಾರ್ಯೆ ಡಾ.ಪುಟ್ಟಮಣಿ ದೇವಿದಾಸ, ಡಾ.ಸೀಮಾ ಪಾಟೀಲ ಮತ್ತು ಎಲ್ಲ ಬೋಧಕರು ಭಾಗವಹಿಸಿದ್ದರು. ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕ ಡಾ.ಸಿದ್ಧಲಿಂಗರೆಡ್ಡಿ ವಂದಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...