ಕಲಬುರಗಿ| ಗುಲಬರ್ಗಾ ವಿವಿಯ ಸಮಗ್ರ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆಗ್ರಹ

Date:

Share post:

ಕಲಬುರಗಿ: ಶೈಕ್ಷಣಿಕವಾಗಿ ಮತ್ತು ಆಡಳಿತಾತ್ಮಕವಾಗಿ ಶ್ರೀಮಂತ ಇತಿಹಾಸ ಹೊಂದಿರುವ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಹಿಂದಿನಂತೆ ಘನತೆ ಹೆಚ್ಚಿಸಿ ಸರ್ವಾಂಗೀಣ ಅಭಿವೃದ್ಧಿಗೆ ಬದ್ದತೆ ಪ್ರದರ್ಶಿಸುವಂತೆ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆಗ್ರಹಿಸಿದೆ.

ವಿವಿಯ ನೂತನ ಕುಲಪತಿಗಳಾಗಿ ನೇಮಕವಾದ ಪ್ರೊ. ಶಶಿಕಾಂತ ಎಸ್. ಉಡಿಕೇರಿ ಅವರಿಗೆ ಹೋರಾಟ ಸಮಿತಿಯ ನಿಯೋಗ ಭೇಟಿ ಮಾಡಿ, ವಿವಿಯಲ್ಲಿ ಖಾಲಿ ಇರುವ ಶಿಕ್ಷಕರ ಮತ್ತು ಶಿಕ್ಷಕೇತರ ಹುದ್ದೆಗಳ ಭರ್ತಿ ಮಾಡುವುದು, ಮತ್ತಿತ್ತರ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ದಿಟ್ಟತನದ ಧೋರಣೆ ನುಸರಿಸಬೇಕೆಂದು ಕುಲಪತಿಗಳಿಗೆ ನಿಯೋಗ ಒತ್ತಾಯಿಸಿದೆ.

ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರ ಕಲಬುರಗಿಯಲ್ಲಿರುವ ಗುಲಬರ್ಗಾ ವಿವಿಯ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತೀರಿ ಎಂದು ಭರವಸೆ ಇಟ್ಟಿರುವುದಾಗಿ ಸಮಿತಿಯ ಮುಖಂಡರು ಹೇಳಿದ್ದಾರೆ.

ಈ ಸಂದರ್ಭದಲ್ಲಿ ವಿವಿಯ ಕುಲಸಚಿವರಾದ ಪ್ರೊ.ರಮೇಶ ಲಂಡನಕರ್, ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ಲಕ್ಮಣ ದಸ್ತಿ , ಸಮಿತಿಯ ಪ್ರಮುಖರಾದ ಪ್ರೊ.ಆರ್.ಕೆ.ಹುಡಗಿ, ಪ್ರೊ.ಬಸವರಾಜ ಕುಮ್ನುರ್, ಡಾ.ಮಾಜಿದ ದಾಗಿ, ಮನೀಷ್ ಜಾಜು.ರೌಫ ಖಾದ್ರಿ, ರಾಜು ಜೈನ ಸೇರಿದಂತೆ ಅನೇಕರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...