ಕಲಬುರಗಿ| ಧಾರಾಕಾರ ಮಳೆಯಲ್ಲೇ ಪ್ರವಾಹಪೀಡಿತ ಗ್ರಾಮಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ

Date:

Share post:

ಕಲಬುರಗಿ: ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಇಂತಹ ಸನ್ನಿವೇಶದಲ್ಲಿ ಪ್ರವಾಹ ಪೀಡಿತ ಚಿತ್ತಾಪುರ ತಾಲೂಕಿನ ಹಳೆ ಹೆಬ್ಬಾಳ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಈ ಸಂದರ್ಭದಲ್ಲಿ ಅವರು ಮಳೆಯಿಂದ ಬಿದ್ದ ಮನೆಯನ್ನು ಪರಿಶೀಲಿಸಿ ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಳೆ ಹೆಬ್ಬಾಳ ಗ್ರಾಮವನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರು ಸಚಿವರ ಮುಂದೆ ಬೇಡಿಕೆ ಇರಿಸಿದರು. ಗ್ರಾಮಸ್ಥರಿಗೆ ಸ್ಪಂದಿಸಿದ ಸಚಿವರು ಮಳೆ ತುಸು ಕಡಿಮೆಯಾದ ನಂತರ ಗ್ರಾಮಕ್ಕೆ ಭೇಟಿ ನೀಡಿ ಬೇಡಿಕೆ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.

ಗ್ರಾಮದ ಸ್ಥಳಾಂತರಕ್ಕೆ ತಾವು ಮುಂದಾಗಿರುವುದಾಗಿ ಹೇಳಿದ ಸಚಿವರು ಎಷ್ಟು ಕುಟುಂಬಗಳು ಸ್ಥಳಾಂತರಗೊಳ್ಳಬೇಕು ಎನ್ನುವ ಬಗ್ಗೆ ತೀರ್ಮಾನಿಸುವಂತೆ ಗ್ರಾಮಸ್ಥರಿಗೆ ಸಲಹೆ ನೀಡಿದರು.

ಈ ನಡುವೆ ಗ್ರಾಮಸ್ಥರೊಂದಿಗೆ ಗ್ರಾಮಸಭೆ ನಡೆಸುವಂತೆ ಸ್ಥಳದಲ್ಲಿದ್ದ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಎಸಿ ಸಾಹಿತ್ಯ ಅವರಿಗೆ ಸೂಚಿಸಿದರು.

ಗ್ರಾಮಸ್ಥರಿಗೆ ಬೇಕಾಗುವ ಸೌಲಭ್ಯ ಒದಗಿಸುವಂತೆ ಕಾಳಗಿ ತಹಸೀಲ್ದಾರಗೆ ಸೂಚಿಸಿದರು.

ನಿರಂತರ ಮಳೆಯಿಂದ ಬೆಣ್ಣೆತೊರ ಜಲಾಶಯದಿಂದ ನೀರು ಹರಿಬಿಟ್ಟಿದ್ದರಿಂದ ಹಳೆ ಹೆಬ್ಬಾಳ ಗ್ರಾಮಕ್ಕೆ ನೀರು ನುಗ್ಗಿದ್ದರಿಂದ ಗ್ರಾಮಸ್ಥರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ ಊಟ ವಸತಿ ವ್ಯವಸ್ಥೆ ಕಲ್ಪಿಸಲಾಗಿತ್ತು.

Share post:

spot_imgspot_img

Popular

More like this
Related

ಕಲಬುರಗಿ: ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಚರ್ಮ ಕ್ಯಾನ್ಸರ್ ಜಾಗೃತಿ ಶಿಬಿರ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಖ್ವಾಜಾ ಬಂದಾ ನವಾಜ್ ದರ್ಗಾದ 622ನೇ ಅದ್ಧೂರಿ ಸಂದಲ್ ಮೆರವಣಿಗೆ

ಕಲಬುರಗಿ, ಮೇ 3: ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರ ಹಾಗೂ...

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...