ಕಲಬುರಗಿ| ಧಾರಾಕಾರ ಮಳೆಯಿಂದ ರಸ್ತೆ, ಬೆಳೆ ಹಾನಿ; ಪರಿಹಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಆಗ್ರಹ

Date:

Share post:

ಕಲಬುರಗಿ: ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಪ್ಲಾ ನಾಯಕ್ ತಾಂಡಾದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮವಾಗಿ ಭಾರೀ ಪ್ರಮಾಣದ ರಸ್ತೆ ಹಾಗೂ ಬೆಳೆ ಹಾನಿಗೀಡಾಗಿದೆ. ಸರ್ಕಾರ ಕೂಡಲೇ ಪರಿಹಾರ ಕ್ರಮಕ್ಕೆ ಮುಂದಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಆಗ್ರಹಿಸಿದೆ.

ಭಾರೀ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣವಾಗಿ ಕುಸಿದು ಹೋಗಿದ್ದು, ಸೋಯಾ, ಕಬ್ಬು ಸಂಪೂರ್ಣ ನೆಲಕಚ್ಚಿದೆ. ಇದರಿಂದ ರೈತರು ಬಹಳಷ್ಟು ನಷ್ಟ ಅನುಭವಿಸಿದ್ದಾರೆ. ಕೂಡಲೇ ರಸ್ತೆಯನ್ನು ದುರಸ್ಥಿಗೊಳಿಸಬೇಕು, ಹಾನಿಯಾದ ರೈತರ ಬೆಳೆಗೆ ಪರಿಹಾರ ನೀಡಬೇಕೆಂದು ಸೇನೆಯ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಚಿಂಚೋಳಿ ತಾಲ್ಲೂಕು ಅಧ್ಯಕ್ಷ ಲಿಂಬಾಜಿ ಚವ್ಹಾಣ್ ಅವರ ನೇತೃತ್ವದಲ್ಲಿ ರಸ್ತೆ ತಡೆದು ಹೋರಾಟ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಶಂಕರ್ ಪವಾರ್, ಸುಧಾ, ರಮೇಶ್ ಚವ್ಹಾಣ್ ಸೇರಿದಂತೆ 20ಕ್ಕೂ ಹೆಚ್ಚು ಯುವ ಕಾರ್ಯಕರ್ತರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...