ಕಲಬುರಗಿ| ಧಾರಾಕಾರ ಮಳೆಯಿಂದ ರಸ್ತೆ, ಬೆಳೆ ಹಾನಿ; ಪರಿಹಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಆಗ್ರಹ

Date:

Share post:

ಕಲಬುರಗಿ: ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಪ್ಲಾ ನಾಯಕ್ ತಾಂಡಾದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮವಾಗಿ ಭಾರೀ ಪ್ರಮಾಣದ ರಸ್ತೆ ಹಾಗೂ ಬೆಳೆ ಹಾನಿಗೀಡಾಗಿದೆ. ಸರ್ಕಾರ ಕೂಡಲೇ ಪರಿಹಾರ ಕ್ರಮಕ್ಕೆ ಮುಂದಾಗಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಆಗ್ರಹಿಸಿದೆ.

ಭಾರೀ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣವಾಗಿ ಕುಸಿದು ಹೋಗಿದ್ದು, ಸೋಯಾ, ಕಬ್ಬು ಸಂಪೂರ್ಣ ನೆಲಕಚ್ಚಿದೆ. ಇದರಿಂದ ರೈತರು ಬಹಳಷ್ಟು ನಷ್ಟ ಅನುಭವಿಸಿದ್ದಾರೆ. ಕೂಡಲೇ ರಸ್ತೆಯನ್ನು ದುರಸ್ಥಿಗೊಳಿಸಬೇಕು, ಹಾನಿಯಾದ ರೈತರ ಬೆಳೆಗೆ ಪರಿಹಾರ ನೀಡಬೇಕೆಂದು ಸೇನೆಯ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಚಿಂಚೋಳಿ ತಾಲ್ಲೂಕು ಅಧ್ಯಕ್ಷ ಲಿಂಬಾಜಿ ಚವ್ಹಾಣ್ ಅವರ ನೇತೃತ್ವದಲ್ಲಿ ರಸ್ತೆ ತಡೆದು ಹೋರಾಟ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಶಂಕರ್ ಪವಾರ್, ಸುಧಾ, ರಮೇಶ್ ಚವ್ಹಾಣ್ ಸೇರಿದಂತೆ 20ಕ್ಕೂ ಹೆಚ್ಚು ಯುವ ಕಾರ್ಯಕರ್ತರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...

ಕಲಬುರಗಿ: ಗುಂಡಿನ ದಾಳಿ; ವ್ಯಕ್ತಿಯ ಭೀಕರ ಕೊಲೆ

ಕಲಬುರಗಿ: ಬಲರಾಮ ಚೌಕ್ ನಿಂದ ವಾಡಿ ಪಟ್ಟಣಕ್ಕೆ ಸ್ಕೂಟಿ ಮೇಲೆ ಹೋಗುತ್ತಿದ್ದ...

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...