ಕಲಬುರಗಿ| ಹಳೆಯ ವೈಷಮ್ಯ; ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಭೀಕರ ಕೊಲೆ

Date:

Share post:

ಕಲಬುರಗಿ: ಹಳೆಯ ವೈಷಮ್ಯದಿಂದಾಗಿ ಮದ್ಯಪಾನ ಮಾಡಿಸಿ ಪಾರ್ಟಿ ಮಾಡುತ್ತಲ್ಲೇ ವ್ಯಕ್ತಿಯೊಬ್ಬರ ತಲೆಯ ಮೇಲೆ ಕಲ್ಲನ್ನು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿಯ ಗ್ರಾಮಸ್ಥರನ್ನು ಬೆಚ್ಚಿ ಬೀಳುವಂತೆ ಮಾಡಿದೆ.

ಶ್ರೀನಿವಾಸ ಸರಡಗಿಯ ನಿವಾಸಿಯಾಗಿದ್ದ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಶ್ರೀಮಂತರಾಯ ತಂದೆ ಕವಿರಾಜ (32) ಎಂಬಾತನೇ ಕೊಲೆಯಾಗಿದ್ದಾನೆ.

ಕೊಲೆಯಾದ ಶ್ರೀಮಂತರಾಯನು ಕಳೆದ ಕೆಲವು ವರ್ಷಗಳ ಹಿಂದೆ ಕೊಲೆಯೊಂದರಲ್ಲಿ ಭಾಗಿಯಾಗಿದ್ದ ಎಂದು ಹೇಳಲಾಗುತ್ತಿದ್ದು ಇದೇ ಹಳೆಯ ವೈಷಮ್ಯದಿಂದಾಗಿ ಗ್ರಾಮದಲ್ಲಿ ಕೆಲವು ದುಷ್ಕರ್ಮಿಗಳು ಸೇರಿಕೊಂಡು ಶುಕ್ರವಾರ ರಾತ್ರಿ ಶ್ರೀಮಂತರಾಯನೊಂದಿಗೆ ಕೂಡಿಕೊಂಡು ಮದ್ಯಪಾನ ಮಾಡುತ್ತ ಪಾರ್ಟಿ ಮಾಡಿದ್ದಾರೆ, ಇದೇ ವೇಳೆ ಸಮಯವನ್ನು ಸಾಧಿಸಿದ ದುಷ್ಕರ್ಮಿಗಳು ಶ್ರೀಮಂತರಾಯನ ತಲೆಯ ಮೇಲೆ ಕಲ್ಲನ್ನು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದಾರೆಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಕೊಲೆ ಸುದ್ದಿ ಅರಿತ ಎಸಿಪಿ, ಪಿ.ಐ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಸ್ಥಳವನ್ನು ಪರಿಶೀಲಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ವಿಶ್ವ ವಿದ್ಯಾಲಯ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಕೊಲೆ ಮಾಡಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ವ್ಯಾಪಕ ಜಾಲವನ್ನು ಬೀಸಿದ್ದಾರೆಂದು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...