ಕಲಬುರಗಿ| ಎಸಿಪಿ, ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ ಮಾಡಿ ಆದೇಶ

Date:

Share post:

ಕಲಬುರಗಿ: ಜಿಲ್ಲೆಯ ವಿವಿಧೆಡೆ ಕೆಲಸ ಮಾಡುತ್ತಿದ್ದ ಮೂವರು ಡಿವೈಎಸ್ಪಿ ದರ್ಜೆ ಅಧಿಕಾರಿಗಳು ಹಾಗೂ ಏಳು ಮಂದಿ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಸೋಮವಾರ ರಾಜ್ಯ ಪೊಲೀಸ್‌ ಇಲಾಖೆಯು ಆದೇಶ ಹೊರಡಿಸಿದೆ.

ಕಲಬುರಗಿ ಗ್ರಾಮೀಣ ಉಪ ವಿಭಾಗದ ಎಸಿಪಿ ಡಿ.ಜಿ.ರಾಜಣ್ಣ ಅವರನ್ನು ಕಲಬುರಗಿಯ ಪೊಲೀಸ್‌ ತರಬೇತಿ ಶಾಲೆಗೆ, ಕಲಬುರಗಿ ಸಿಸಿಬಿ ಎಸಿಪಿ ಸಂತೋಷ ಬನಹಟ್ಟಿ ಅವರನ್ನು ಬಾಗಲಕೋಟೆಯ ಜಿಲ್ಲೆಯ ಹುನಗುಂದ ಉಪವಿಭಾಗಕ್ಕೆ, ಸೆನ್‌ ವಿಭಾಗದ ಎಸಿಪಿ ಮಡೋಳಪ್ಪ ಪಿ.ಎಸ್‌. ಅವರನ್ನು ಬೀದರ್‌ ಜಿಲ್ಲೆಯ ಹುಮನಾಬಾದ್ ಉಪವಿಭಾಗಕ್ಕೆ ವರ್ಗಾಯಿಸಲಾಗಿದೆ. ಸ್ಥಳ ನಿರೀಕ್ಷಣೆಯಲ್ಲಿದ್ದ ಗಿರಿಮಲ್ಲ ತಳಕಟ್ಟಿ ಅವರನ್ನು ಗ್ರಾಮೀಣ ಉಪವಿಭಾಗದ ಎಸಿಪಿಯಾಗಿ ವರ್ಗಾಯಿಸಲಾಗಿದೆ.

ಕಲಬುರಗಿಯ ಸ್ಟೇಷನ್‌ ಬಜಾರ್‌ ಇನ್‌ಸ್ಪೆಕ್ಟರ್‌ ಶಕೀಲ್‌ಅಹ್ಮದ್ ಅಂಗಡಿ ಅವರನ್ನು ಡಿಸಿಆರ್‌ಇಗೆ, ಅಶೋಕನಗರ ಠಾಣೆ ಇನ್‌ಸ್ಪೆಕ್ಟರ್‌ ಅರುಣಕುಮಾರ ಅವರನ್ನು ಕಲಬುರಗಿ ಸಿಸಿಬಿಗೆ, ಫರಹತಾಬಾದ್‌ ಠಾಣೆ ಇನ್‌ಸ್ಪೆಕ್ಟರ್‌ ಮಲ್ಲಿಕಾರ್ಜುನ ಇಕ್ಕಳಕಿ ಅವರನ್ನು ಬೀದರ್‌ ಜಿಲ್ಲೆಯ ಡಿಎಸ್‌ಬಿಗೆ, ವಿಶ್ವವಿದ್ಯಾಲಯ ಠಾಣೆ ಇನ್‌ಸ್ಪೆಕ್ಟರ್‌ ಸುಶೀಲಕುಮಾರ್ ಅವರನ್ನು ಕಲಬುರಗಿ ಸಬರ್ಬನ್‌ ಠಾಣೆಗೆ, ಸಬರ್ಬನ್‌ ಠಾಣೆ ಇನ್‌ಸ್ಪೆಕ್ಟರ್‌ ಸಂತೋಷ ತಟ್ಟೆಪಲ್ಲಿ ಅವರನ್ನು ಬೀದರ್‌ ಜಿಲ್ಲೆಯ ಹುಮನಾಬಾದ್‌ ವೃತ್ತಕ್ಕೆ, ಆಳಂದ ಠಾಣೆ ಇನ್‌ಸ್ಪೆಕ್ಟರ್‌ ಪ್ರಕಾಶ ಯಾತನೂರ ಅವರನ್ನು ಕಲಬುರಗಿಯ ಅಶೋಕನಗರ ಠಾಣೆಗೆ, ಕಲಬುರಗಿ ಪೊಲೀಸ್‌ ವಸತಿ ಶಾಲೆಯ ಹುಸೇನ್‌ಬಾಷಾ ಸಿ. ಅವರನ್ನು ಫರಹತಾಬಾದ್‌ ಠಾಣೆಗೆ, ಬೀದರ್‌ ಜಿಲ್ಲೆಯ ಹುಮನಾಬಾದ್‌ ವೃತ್ತದ ಇನ್‌ಸ್ಪೆಕ್ಟರ್‌ ಗುರುಲಿಂಗಪ್ಪ ಎಂ. ಪಾಟೀಲ ಅವರನ್ನು ಕಲಬುರಗಿಯ ಸ್ಟೇಷನ್‌ ಬಜಾರ್‌ ಠಾಣೆಗೆ ವರ್ಗಾಯಿಸಿ ಆದೇಶಿಸಲಾಗಿದೆ.

 

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...