ಕಲಬುರಗಿ| ಹಸಿ ಬರಗಾಲ ಘೋಷಿಸುವಂತೆ ಆಗ್ರಹಿಸಿ ಕಲಬುರಗಿ ಬಂದ್; ಪ್ರಯಾಣಿಕರ ಪರದಾಟ

Date:

Share post:

ಕಲಬುರಗಿ: ನೆರೆ ಹಾವಳಿಗೆ ತುತ್ತಾಗಿರುವ ಕಲಬುರಗಿ ಜಿಲ್ಲೆಯನ್ನು ಹಸಿ ಬರಗಾಲ ಘೋಷಿಸಿ ವಿಶೇಷ ಪ್ಯಾಕೇಜ್ ನೀಡಬೇಕೆಂದು ಆಗ್ರಹಿಸಿ, ರೈತ, ದಲಿತ, ಕನ್ನಡಪರ ಸಂಘಟನೆಗಳು ನೀಡಿದ್ದ ಕಲಬುರಗಿ ಬಂದ್ ಕರೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಬೆಳಗ್ಗೆ ಹೊರಡಬೇಕಿದ್ದ ಹಲವು ಬಸ್ ಗಳ ಸಂಚಾರದಲ್ಲಿ ಸ್ಥಗಿತ ಆಗಿರುವುದರಿಂದ ಪ್ರಯಾಣಿಕರು ಪರದಾಡುವಂತಹ ಸ್ಥಿತಿ ಎದುರಾಯಿತು.

ಬಂದ್ ಅಂಗವಾಗಿ ಪ್ರತಿಭಟನಾಕಾರರು ನಗರದ ಕೇಂದ್ರೀಯ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸುತ್ತಿದ್ದು, ನೆರೆ ಹಾದಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರ ಈ ಭಾಗಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕು, ಒಂದೇ ಒಂದು ರೂಪಾಯಿ ಬಿಡುಗಡೆ ಮಾಡದೆ ಇರುವ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದರು.

ಪ್ರತಿಭಟನೆಯಲ್ಲಿ ಶರಣಬಸಪ್ಪ ಮಮಶೆಟ್ಟಿ, ಭೀಮಾಶಂಕರ ಮಾಡ್ಯಾಳ, ಮೌಲಾ ಮುಲ್ಲಾ, ದಯಾನಂದ ಪಾಟೀಲ್, ನಾಗೇಂದ್ರ ಥoಬೆ, ಸಾಜಿದ್, ಪ್ರಭುದೇವ ಯಳಸಂಗಿ ಸೇರಿದಂತೆ ಹಲವು ಹೋರಾಟಗಾರರು ಬಸ್ ನಿಲ್ದಾಣದ ಎದುರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬಂದ್ ನಿಮಿತ್ತ ನಗರದ ಹಲವು ಕಡೆಗಳಲ್ಲಿ ರಸ್ತೆ ಸಂಚಾರ ತಡೆ ನೀಡುವ ಮೂಲಕ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ರೈತ ಮುಖಂಡರು ಹೇಳಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...