ಕಲಬುರಗಿ| ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ಕರೆ

Date:

Share post:

ಕಲಬುರಗಿ: ವಿದ್ಯಾರ್ಥಿಗಳುಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಕರೆ ಕೊಟ್ಟರು.

ಸರಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಪಿ. ಜಿ. ಬಿಲ್ಡಿಂಗ್ ಸಭಾಂಗಣದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸರಕಾರಿ ಮಹಾವಿದ್ಯಾಲಯ (ಸ್ವಾಯತ್ತ), (ನ್ಯಾಕ್ ನಿಂದ ಬಿ+ ಶ್ರೇಣಿ ಮರು ಮಾನ್ಯತೆ ಪಡೆದಿದ್ದು, 2025-26 ನೇಯ ಶೈಕ್ಷಣಿಕ ಸಾಲಿನ ವಿವಿಧ ಘಟಕಗಳಾದ ಸಾಂಸ್ಕøತಿಕ, ಕ್ರೀಡಾ, ಎನ್.ಎಸ್.ಎಸ್., ಎನ್. ಸಿ. ಸಿ., ರೆಡ್ ಕ್ರಾಸ್, ರೆಡ್ ರಿಬ್ಬನ್, ಸೌಟ್ಸ್ ಮತ್ತು ಗೈಡ್ಸ್, ಡಾ. ಬಿ. ಆರ್. ಅಂಬೇಡ್ಕರ ವೇದಿಕೆ, ಕಾರ್ಯಚಟುವಟಿಕೆಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಒಂದು ಸಮಯದಲ್ಲಿಹೆಣ್ಣು ಮಕ್ಕಳೆಂದರೆ ಕೇವಲ ಅಡುಗೆ ಮನೆಗೆ ಸೀಮಿತವನ್ನಾಗಿ ಮಾಡಲಾಗಿತ್ತು ಆದರೆ ಸ್ವಾತಂತ್ರ್ಯ ನಂತರ ಡಾ.ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಿದರು. ಹಾಗಾಗಿ ಇಂದು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ವಿಕಾಸಗೊಳಿಸಲು ಸಂವಿಧಾನದತ್ತವಾಗಿ ನಮಗೆ ಅವಕಾಶಗಳು ದೊರೆತಿವೆ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರಾದ ಪೆÇ್ರ ಶಿವಶರಣ ಗೊಳ್ಳೆ,ಮಹಾನಗರ ಪಾಲಿಕೆಯ ವಲಯ ಒಂದರ ಆಯುಕ್ತ ಗೌತಮ್ ಕಾಂಬಳೆ,ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ.ಸವಿತಾ ತಿವಾರಿ ಅವರು ವಹಿಸಿದ್ದರು. ಕಾರ್ಯಕ್ರಮವನ್ನು ಡಾ. ಬಲ ಭೀಮ ಸಾಂಗ್ಲಿಯವರು ನಿರ್ವಹಿಸಿದರು.

ಡಾ.ಟಿ.ವ್ಹಿ ಅಡಿವೇಶ, ಡಾ. ಮಲ್ಲೇಶಪ್ಪ ಎಸ್.ಕುಂಬಾರ, ಡಾ.ವಿಜಯಕುಮಾರ ಸಾಲಿಮನಿ, ಡಾ.ರಾಜಕುಮಾರ ಸಲಗರ, ಡಾ. ದೌಲಪ್ಪ ಬಿ.ಹೆಚ್, ಡಾ.ರಾಜಶೇಖರ ಮಡಿವಾಳ, ಅಜಯಸಿಂಗ್ ತಿವಾರಿ,ಡಾ.ಶ್ರೀಮಂತ ಹೋಳಕರ, ವಿಜಯಲಕ್ಷ್ಮೀ, ಶಿವಾನಂದ ಸ್ವಾಮಿ ಸೇರಿದಂತೆ ಎಲ್ಲಾ ಘಟಕಗಳ ಸಂಯೋಜಕರು, ವಿದ್ಯಾರ್ಥಿಗಳು, ಕಾಲೇಜಿನ ಸಿಬ್ಬಂದಿಗಳು ಇದ್ದರು. ಡಾ.ರವೀಂದ್ರಕುಮಾರ ಭಂಡಾರಿ ಅವರು ಸ್ವಾಗತಿಸಿದರು. ಕಾರ್ಯಕ್ರಮವನ್ನು ಡಾ. ಬಸಂತ ಸಾಗರ ಅವರ ವಂದನಾರ್ಪಣೆ ಮಾಡಿದರು.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...