ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್ 16 ರಂದು ಆರೆಸ್ಸೆಸ್ ಪಥ ಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಇತ್ತೀಚೆಗೆ ಆರೆಸ್ಸೆಸ್ ಪಥ ಸಂಚಲನಕ್ಕೆ ಚಿತ್ತಾಪುರ ತಹಸೀಲ್ದಾರ್ ಅವರು ಕಾನೂನು ಸುವ್ಯವಸ್ಥೆ ಕಾರಣ ನೀಡಿ ಅನುಮತಿ ನಿರಾಕರಿಸಿದ್ದರು. ಈ ಆದೇಶ ಪ್ರಶ್ನಿಸಿ ಆರೆಸ್ಸೆಸ್ ಜಿಲ್ಲಾ ಸಂಚಾಲಕ ಅಶೋಕ್ ಪಾಟೀಲ್ ಅವರು ಕಲಬುರಗಿ ಪೀಠದ ಹೈಕೋರ್ಟ್ ಮೆಟ್ಟಿಲೇರಿದ್ದರು.
ನ್ಯಾ.ಎಂ.ಜಿ.ಎಸ್ ಕಮಲ್ ಅವರಿದ್ದ ಕಲಬುರಗಿ ಹೈಕೋರ್ಟ್ ಏಕಸದಸ್ಯ ಪೀಠವು ಗುರುವಾರ ವಿಚಾರಣೆ ನಡೆಸಿ, ಆರೆಸ್ಸೆಸ್ ಪಥ ಸಂಚಲನಕ್ಕೆ ಷರತ್ತುಬದ್ಧವಾಗಿ ಅನುಮತಿ ನೀಡಿ ಆದೇಶ ಹೊರಡಿಸಿದೆ.
50 ಮಂದಿ ಬ್ಯಾಂಡ್ ಸದಸ್ಯರನ್ನು ಸೇರಿದಂತೆ 300 ಗಣವೇಶಧಾರಿಗಳನ್ನು ಒಳಗೊಂಡ ಒಳಗೊಂಡಿರುವ 350 ಮಂದಿಗೆ ಪಥ ಸಂಚಲನಕ್ಕೆ ಅವಕಾಶ ನೀಡಿ ಆದೇಶಿಸಿದೆ.


