ಕಲಬುರಗಿ| ಕಬ್ಬಿನ ದರ ನಿಗದಿಗೆ ಸಭೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ 

Date:

Share post:

ಕಲಬುರಗಿ: ಕಬ್ಬಿನ ದರ ನಿಗದಿಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಹಾಗೂ ಪ್ರತಿನಿಧಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ವಿಡಿಯೋ ಕಾನ್ಫಿರೆನ್ಸ್ ಮೂಲಕ ಸಭೆ ನಡೆಸಿದರು.

ನವೆಂಬರ್ 7 ರಂದು ಮಾನ್ಯ ಸಿಎಂ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಕಬ್ಬಿನ ದರ ನಿಗದಿಪಡಿಸಿ ಅದರಂತೆ ಒದಗಿಸಲು ಮಾನ್ಯ ಸಚಿವರು ಕಾರ್ಖಾನೆ ಮಾಲೀಕರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಾರ್ಖಾನೆ ಮಾಲೀಕರು ಸರ್ಕಾರ ನಿಗದಿಪಡಿಸಿದ ದರದಲ್ಲಿ ಕಬ್ಬು ಖರೀದಿಗೆ ಸಂಬಂಧಿಸಿದಂತೆ ಆಗುವ ಕಷ್ಟಗಳನ್ನು ಸಚಿವರಿಗೆ ತಿಳಿಸಿದರು.

ಆಗ ಉತ್ತರಿಸಿದ ಸಚಿವರು, ಸರಕಾರವು ಈಗಾಗಲೇ ತಮ್ಮ ಎಲ್ಲಾ ಅಹವಾಲುಗಳನ್ನು ಆಲಿಸಿದ್ದು, ಕಳೆದ ಬಾರಿಗಿಂತ ಈ ಸಲ ಒಳ್ಳೆಯ ಬೆಳೆ ಬೆಳೆದಿದ್ದು, ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಯವರು ರೈತರಿಗೆ ಹೆಚ್ಚಿನ ದರ ನಿಗದಿಪಡಿಸಿ ಅದರಂತೆ ಘೋಷಿಸಿ, ಕಬ್ಬು ಕಟಾವು ಹಾಗೂ ನುರಿಸುವ ಕಾರ್ಯವನ್ನು ಪ್ರಾರಂಭಿಸುವಂತೆ ಸೂಚಿಸಿದರು.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...