ಕಲಬುರಗಿ| ಕಬ್ಬಿನ ದರ ನಿಗದಿಗೆ ಸಭೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ 

Date:

Share post:

ಕಲಬುರಗಿ: ಕಬ್ಬಿನ ದರ ನಿಗದಿಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಹಾಗೂ ಪ್ರತಿನಿಧಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ವಿಡಿಯೋ ಕಾನ್ಫಿರೆನ್ಸ್ ಮೂಲಕ ಸಭೆ ನಡೆಸಿದರು.

ನವೆಂಬರ್ 7 ರಂದು ಮಾನ್ಯ ಸಿಎಂ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಕಬ್ಬಿನ ದರ ನಿಗದಿಪಡಿಸಿ ಅದರಂತೆ ಒದಗಿಸಲು ಮಾನ್ಯ ಸಚಿವರು ಕಾರ್ಖಾನೆ ಮಾಲೀಕರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಾರ್ಖಾನೆ ಮಾಲೀಕರು ಸರ್ಕಾರ ನಿಗದಿಪಡಿಸಿದ ದರದಲ್ಲಿ ಕಬ್ಬು ಖರೀದಿಗೆ ಸಂಬಂಧಿಸಿದಂತೆ ಆಗುವ ಕಷ್ಟಗಳನ್ನು ಸಚಿವರಿಗೆ ತಿಳಿಸಿದರು.

ಆಗ ಉತ್ತರಿಸಿದ ಸಚಿವರು, ಸರಕಾರವು ಈಗಾಗಲೇ ತಮ್ಮ ಎಲ್ಲಾ ಅಹವಾಲುಗಳನ್ನು ಆಲಿಸಿದ್ದು, ಕಳೆದ ಬಾರಿಗಿಂತ ಈ ಸಲ ಒಳ್ಳೆಯ ಬೆಳೆ ಬೆಳೆದಿದ್ದು, ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಯವರು ರೈತರಿಗೆ ಹೆಚ್ಚಿನ ದರ ನಿಗದಿಪಡಿಸಿ ಅದರಂತೆ ಘೋಷಿಸಿ, ಕಬ್ಬು ಕಟಾವು ಹಾಗೂ ನುರಿಸುವ ಕಾರ್ಯವನ್ನು ಪ್ರಾರಂಭಿಸುವಂತೆ ಸೂಚಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...