ಕಲಬುರಗಿ| ಕೊಲೆಗೆ ಯತ್ನ ಆರೋಪ; ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ಬಂಧನ

Date:

Share post:

ಕಲಬುರಗಿ: ಕೊಲೆಗೆ ಯತ್ನದ ಆರೋಪದ ಮೇರೆಗೆ ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ಅವರನ್ನು ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ.

ಜೇವರ್ಗಿಯ ನಾರಾಯಣಪುರ ಗ್ರಾಮದ ನಾಟಿ ಔಷಧಿ ಕೊಡುವ ರಶೀದ್ ಮುತ್ಯಾ ಎಂಬಾತರನ್ನು ಬಂಧಿಸಿ, ಅವರನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಮಣಿಕಂಠ ರಾಠೋಡ್ ಅದೇ ಗ್ರಾಮದಲ್ಲಿ ಹಲವು ಜನರೊಂದಿಗೆ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಯ ಬಳಿಕ ಗ್ರಾಮದಲ್ಲಿ ದೊಡ್ಡ ಹೈಡ್ರಾಮಾ ಸೃಷ್ಟಿಸಲಾಗಿದೆ. ಬಳಿಕ ರಶೀದ್ ಮುತ್ಯಾ ಅಲ್ಲಿಂದ ಕಾರಿನ ಮೂಲಕ ಬೇರೆ ಕಡೆಗೆ ಹೋಗುತ್ತಿದ್ದ ವೇಳೆ ಕಾರಿಗೆ ಕಲ್ಲು ಹೊಡೆದಿದ್ದು, ಕಾರು ಚಾಲಕನಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಇದೇ ಕಾರಣಕ್ಕಾಗಿ ಕೊಲೆಗೆ ಯತ್ನಿಸಿರುವ ಆರೋಪದ ಮೇರೆಗೆ ಮಣಿಕಂಠ ರಾಠೋಡ್ ರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ: ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಚರ್ಮ ಕ್ಯಾನ್ಸರ್ ಜಾಗೃತಿ ಶಿಬಿರ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಖ್ವಾಜಾ ಬಂದಾ ನವಾಜ್ ದರ್ಗಾದ 622ನೇ ಅದ್ಧೂರಿ ಸಂದಲ್ ಮೆರವಣಿಗೆ

ಕಲಬುರಗಿ, ಮೇ 3: ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರ ಹಾಗೂ...

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...