ಕಲಬುರಗಿ| ಹೆಸರು, ಉದ್ದು, ಸೂರ್ಯಕಾಂತಿ ಕಾಳು ಹಾಗೂ ಸೋಯಾಬಿನ್ ಮಾರಾಟ ಮಾಡಲು ಕಾಲಾವಧಿ ವಿಸ್ತರಣೆ: ಡಿಸಿ ಫೌಜಿಯಾ ತರನ್ನುಮ್

Date:

Share post:

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ. ಗುಣಮಟ್ಟದ ಹೆಸರು ಕಾಳು, ಉದ್ದಿನ ಕಾಳು, ಸೂರ್ಯಕಾಂತಿ ಹಾಗೂ ಸೋಯಾಬಿನ್ ಮಾರಾಟ ಮಾಡಲು ಈಗಾಗಲೇ ನಿಗದಿತ ಅವಧಿಯಲ್ಲಿ ನೊಂದಾಯಿಸಿಕೊಂಡಿರುವ ರೈತರು ಮಾರಾಟ ಮಾಡುವ ಕಾಲಾವಧಿ ವಿಸ್ತರಿಸಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

ಹೆಸರು ಕಾಳು ಪ್ರತಿ ಕ್ವಿಂಟಾಲ್‍ಗೆ 8,768 ರೂ., ಉದ್ದಿನ ಕಾಳು ಪ್ರತಿ ಕ್ವಿಂಟಾಲ್‍ಗೆ 7,800 ರೂ. ಮತ್ತು ಸೂರ್ಯಕಾಂತಿ ಪ್ರತಿ ಕ್ವಿಂಟಾಲ್‍ಗೆ 7,721 ರೂ. ಗಳಂತೆ ಖರೀದಿಸಲಾಗುತ್ತಿದ್ದು, ಈ ಉತ್ಪನ್ನಗಳ ಮಾರಾಟ ಮಾಡಲು ಇದೇ ಜನವರಿ 22ರ ವರೆಗೆ ಹಾಗೂ ಸೋಯಾಬೀನ್ ಪ್ರತಿ ಕ್ವಿಂಟಾಲ್‍ಗೆ 5,328 ರೂ. ಗಳಂತೆ ಮಾರಾಟ ಮಾಡಲು ಜನವರಿ 26 ರವರೆಗೆ ಕಾಲಾವಧಿ ವಿಸ್ತರಿಸಲಾಗಿದೆ.

ಜಿಲ್ಲೆಯ ರೈತರು ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ (ಪಿ.ಎ.ಸಿ.ಎಸ್) (PACS) ಹಾಗೂ (ಎಫ್.ಪಿ.ಓ.) FPO ಗಳಿಗೆ ಭೇಟಿ ನೀಡಿ ತಾವು ಬೆಳೆದ ಹೆಸರು ಕಾಳು, ಉದ್ದಿನ ಕಾಳು, ಸೂರ್ಯಕಾಂತಿ ಹಾಗೂ ಸೋಯಾಬೀನ ನಿಗದಿತ ಅವಧಿಯಲ್ಲಿ ಮಾರಾಟ ಮಾಡಬೇಕು.

ಹೆಚ್ಚಿನ ಮಾಹಿತಿಗಾಗಿ ಉದ್ದಿನ ಕಾಳು ಮತ್ತು ಸೋಯಾಬೀನ್ ಮಾರಾಟಕ್ಕೆ ಕೆ.ಎಸ್.ಸಿ.ಎಮ್.ಎಫ್. ಮೊಬೈಲ್ ಸಂಖ್ಯೆ 9449864446, ಹೆಸರು ಕಾಳು ಮಾರಾಟಕ್ಕೆ ಕೆ.ಎಸ್.ಪಿ.ಎ.ಎಮ್.ಎಲ್. ಮೊಬೈಲ್ ಸಂಖ್ಯೆ 9964474444 ಹಾಗೂ ಸೂರ್ಯಕಾಂತಿ ಮಾರಾಟಕ್ಕೆ ಕೆ.ಓ.ಎಫ್. ಮೊಬೈಲ್ ಸಂಖ್ಯೆ. 9591812142 ಸಂಪರ್ಕಿಸಲು ಕೋರಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...