ಕಲಬುರಗಿ : ಸೇಡಂ ಪಟ್ಟಣದಲ್ಲಿರುವ ತಾಲ್ಲೂಕು ಕಚೇರಿ ಪ್ರಜಾಸೌಧಕ್ಕೆ ಹುಸಿ ಬಾಂಬ್ ಬೆದರಿಕೆ ಬಂದಿರುವ ಘಟನೆ ಮಂಗಳವಾರ ನಡೆದಿದೆ.
ಅನಾಮಿಕ ಇಮೇಲ್ ಮೂಲಕ ತಹಶೀಲ್ದಾರ್ ಅವರ ಅಧಿಕೃತ ಇಮೇಲ್ಗೆ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ, ತಹಶೀಲ್ದಾರ್ ಶ್ರೀಯಾಂಕ್ ಧನಶ್ರೀ ಅವರು ತಕ್ಷಣವೇ ಸೇಡಂ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದ ಕೂಡಲೇ ಸ್ಥಳೀಯ ಪೊಲೀಸ್ ಅಧಿಕಾರಿಗಳು, ಬಾಂಬ್ ನಿಷ್ಕ್ರೀಯ ದಳದ ತಂಡದವರು ಹಾಗೂ ಶ್ವಾನದಳದ ಸಿಬ್ಬಂದಿ ಪ್ರಜಾಸೌಧಕ್ಕೆ ದೌಡಾಯಿಸಿ ಕಟ್ಟಡದ ಒಳಭಾಗ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ತೀವ್ರ ತಪಾಸಣೆ ನಡೆಸಿದರು. ಪ್ರಾಥಮಿಕ ಪರಿಶೀಲನೆಯಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.
ಬೆದರಿಕೆ ಸಂದೇಶದ ಹಿನ್ನೆಲೆಯಲ್ಲಿ ಭಯಭೀತರಾದ ಕಚೇರಿ ಸಿಬ್ಬಂದಿ ಮುನ್ನೆಚ್ಚರಿಕಾ ಕ್ರಮವಾಗಿ ಕಚೇರಿಯಿಂದ ಹೊರಗೆ ಬಂದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇಡಂ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದು, ಇಮೇಲ್ ಮೂಲ ಪತ್ತೆಹಚ್ಚುವ ಕಾರ್ಯ ಮುಂದುವರೆದಿದೆ.
ಈ ಸಂದರ್ಭದಲ್ಲಿ ಚಿಂಚೋಳಿ ಡಿವೈಎಸ್ಪಿ ಸಂಗಮನಾಥ ಹಿರೇಮಠ, ತಹಸಿಲ್ದಾರ್ ಶ್ರೀಯಾಂಕ ಧನಶ್ರೀ, ಸಿಪಿಐ ಮಹಾದೇವ ದಿಡ್ಡಿಮನಿ, ಪಿಎಸ್ಐ ಉಪೇಂದ್ರಕುಮಾರ,
ಎಸ್ಐ ತುಳಜಪ್ಪ, ಬಾಂಬ್ ನಿಷ್ಕ್ರೀಯ ದಳ ತಂಡದ ಅಧಿಕಾರಿಗಳಾದ ರಾಜಶೇಖರ, ವಿಜಯಕುಮಾರ, ಬಸವಣ್ಣಪ್ಪ, ಸಂಜೀವ್ , ಶ್ವಾನ ದಳದ ಅಧಿಕಾರಿಗಳಾದ ಮಂಜುನಾಥ, ಅನೀಲ್, ಪ್ರದೀಪ್ ಸೇರಿದಂತೆ ಹಲವರು ಇದ್ದರು.


