ಕಲಬುರಗಿ| ವೆನೆಜುವೆಲಾ ಮೇಲೆ ಅಮೆರಿಕ ದಾಳಿ ಖಂಡಿಸಿ ಪ್ರತಿಭಟನೆ

Date:

Share post:

ಕಲಬುರಗಿ: ಸಿಪಿಐ, ಸಿಪಿಐಎಂ ಹಾಗೂ ಎಸ್.ಯು.ಸಿ.ಐ ಎಡ ಪಕ್ಷಗಳ ನೇತೃತ್ವದಲ್ಲಿ ವೆನೆಜುವೆಲಾ ದೇಶದ ಮೇಲೆ ಅಮೆರಿಕ ದಾಳಿ ಖಂಡಿಸಿ, ಇಲ್ಲಿಯ ಸರ್ದಾರ್ ವಲ್ಲಭ್ ಭಾಯಿ ಪಟೇಲ್ ವೃತ್ತದಲ್ಲಿ ಅಮೇರಿಕಾ ಸಾಮ್ರಾಜ್ಯಶಾಹಿಯ ಪ್ರತಿಕೃತಿಯನ್ನು ದಹಿಸಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ವೆನೆಜುವೆಲಾ ವಿರುದ್ಧ ಯು.ಎಸ್. ಆಕ್ರಮಣ ಹಾಗೂ ಅಲ್ಲಿನ ಅಧ್ಯಕ್ಷ ನಿಕೋಲಸ್ ಮಡುರೊ, ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರ ಅಪಹರಣವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಇದು ವಿಶ್ವಸಂಸ್ಥೆಯ ಚಾರ್ಟರನ್ನು ಮತ್ತು ಹಲವು ಅಂತರರಾಷ್ಟೀಯ ಕಾನೂನು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದರು.

‘ನರ್ಕೊ-ಟೆರರಿಸ್ಟ (ಮಾದಕದ್ರವ್ಯ-ಭಯೋತ್ಪಾದಕ) ಗ್ಯಾಂಗುಗಳ ವಿರುದ್ಧ ಯುದ್ಧದ ನೆಪದಲ್ಲಿ ವೆನೆಜುವೆಲಾದ ಸುತ್ತಲೂ ಕಳೆದ ಹಲವು ದಶಕಗಳಲ್ಲಿ ಕಂಡಿರದ ಭಾರೀ ನೌಕಾ-ವಾಯುಸೇನಾ ಜಮಾವಣೆಯಾಗಿತ್ತು. ಯಾವುದೇ ಪುರಾವೆ ಇಲ್ಲದೆ ನರ್ಕೊ-ಟೆರರಿಸ್ಟ ಗ್ಯಾಂಗುಗಳದ್ದು ಎಂದು ಆಪಾದಿಸಿ 35 ನಾಗರಿಕ ದೋಣಿಗಳ ಮೇಲೆ ಬಾಂಬ್ ದಾಳಿ ನಡೆಸಿ 115 ಅಮಾಯಕ ಜನರ ಕಗ್ಗೊಲೆ ಮಾಡಲಾಗಿದೆ. “ದಿಗ್ಬಂಧಿತ ತೈಲ” ಸಾಗಾಣಿಕೆಯೆಂದು ಆಪಾದಿಸಿ ಎರಡು ತೈಲ ಹಡಗಗಳನ್ನು ಕಡಲುಗಳ್ಳತನದಂತಹ ಕಾರ್ಯಾಚರಣೆಯಲ್ಲಿ ತಡೆದು ನಿಲ್ಲಿಸಲಾಗಿದೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ, “ನಾವು ಹಾಕಿದ್ದಷ್ಟು ಸುಂಕ ತೆಗೆದುಕೊಳ್ಳಬೇಕು, ತಾನು ಹೇಳಿದ ಕಡೆ ವ್ಯಾಪಾರ ಮಾಡಬೇಕು, ರಷ್ಯಾ ಕಡೆಯಿಂದ ತೈಲ ಆಮದು ಮಾಡಿಕೊಳ್ಳಬಾರದು, ಇಲ್ಲದಿದ್ದರೆ ದೊಡ್ಡ ನಷ್ಟ ಅನುಭವಿಸುತ್ತೀರಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೇರೆ ದೇಶಗಳಿಗೆ ಬೆದರಿಕೆ ಹಾಕುತ್ತಿದ್ದಾರೆ”, ಇಂತಹ ಸಾಮ್ರಾಜ್ಯಶಾಹಿಗಳ ಧೋರಣೆಯನ್ನು ಎಡಪಕ್ಷಗಳು ಇಡೀ ದೇಶದಾದ್ಯಂತ ಖಂಡಿಸುತ್ತೇವೆ ಎಂದು ಹೇಳಿದರು.

ಸಿಪಿಐ ಮುಖಂಡ ಭೀಮಾಶಂಕರ ಮಾಡ್ಯಾಳ ಮಾತನಾಡಿ, ಸಾಮ್ರಾಜ್ಯಶಾಹಿ ಅಮೆರಿಕ ಸಣ್ಣಪುಟ್ಟ ದೇಶಗಳ ಮೇಲೆ ಬೆದರಿಯೊಡ್ಡಿ ದಾಳಿ ನಡೆಸುತ್ತಿದೆ, ಇಂತಹ ದಾಳಿಗಳು ಮುಂದುವರೆಸಿದರೆ ಅಮೆರಿಕ ಹೊತ್ತಿ ಉರಿಯುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು.

ಇದೇ ವೇಳೆಯಲ್ಲಿ SUCI (C) ನ ಜಿಲ್ಲಾ ಸಮಿತಿಯ ಸದಸ್ಯರಾದ ಎಸ್. ಎಂ. ಶರ್ಮಾ, ಮೌಲಾ ಮುಲ್ಲಾ ಅವರು ಮಾತನಾಡಿದರು.

ಈ ಸಂಧರ್ಭದಲ್ಲಿ ವಿ.ಜಿ. ದೇಸಾಯಿ, ಮಹೇಶ್ ಎಸ್.ಬಿ., ಮಹೇಶ್ ನಾಡಗೌಡ, ಸೀಮಾ ದೇಶಪಾಂಡೆ, ಜಗನ್ನಾಥ್ ಎಸ್. ಎಚ್., ಹಣಮಂತ ಎಸ್. ಎಚ್., ಸಂತೋಷ್ ಕುಮಾರ್ ಹಿರವೆ, ಮೀನಾಕ್ಷಿ ಬಾಳಿ, ಪರಶುರಾಮ್, ಸುಧಾಮ್ ಧನ್ನಿ, ಪದ್ಮಿನಿ ಕಿರಣಗಿ, ಗೌರಮ್ಮ ಪಾಟೀಲ್, ಶಾಂತಾ ಘಂಟಿ, ಶ್ರೀಮಂತ ಬಿರಾದರ್, ಲವಿತ್ರಾ ವಸ್ತ್ರದ್, ಸಾಜೀದ್ ಅಹ್ಮದ್, ಭೀಮಶೆಟ್ಟಿ ಯಂಪಳ್ಳಿ, ವಿರೂಪಾಕ್ಷಿ ತಡಕಲ್, ಸರ್ವೇಶ್, ಸಿದ್ದಪ್ಪ ಫಾಲ್ಕಿ ಸೇರಿದಂತೆ ಹಲವರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...