ಕಲಬುರಗಿ| ಕೆ.ಹೆಚ್.ಬಿ ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸ ಆಚರಣೆ

Date:

Share post:

ಕಲಬುರಗಿ: ಕೆ. ಹೆಚ್.ಬಿ.ಗ್ರೀನ್ ಪಾರ್ಕ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಲ್ಲಿನ ಕೆ. ಹೆಚ್. ಬಿ. ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ಸೋಮವಾರ ರಾತ್ರಿ ದೇಶ ಭಕ್ತಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಯಿತು.

ಮಕ್ಕಳಿಗಾಗಿ ದೇಶ ಭಕ್ತಿಗೀತೆ, ನೃತ್ಯ, ಗಾಯನ ಸ್ಪರ್ಧೆ ಗಳನ್ನ ಏರ್ಪಡಿಸಿ, ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ದೇಶ ಸೇವೆ ಮಾಡಿ ನಿವೃತ್ತರಾದ ಸೈನಿಕರಿಗೆ, ಜಿಲ್ಲಾ ಮತ್ತು ತಾಲೂಕ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕ-ಶಿಕ್ಷಕಿ ಯರಿಗೆ ಮತ್ತು ವಿವಿಧ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದ ನೌಕರರಿಗೆ ಸನ್ಮಾನಿಸಲಾಯಿತು.

ಕೆ. ಹೆಚ್. ಬಿ. ನಿವಾಸಿಗಳ ಕ್ಷೇಮ ಅಭಿವೃದ್ಧಿ ಸಂಘದ ಅಧ್ಯಕ್ಷ ಸಂಜು ಶೆಟ್ಟಿ ಮಾತಾಡಿ, ಕಾಲೋನಿಯ ಸ್ವಚ್ಛತೆ ಕಾಪಾಡಬೇಕು, ಕಾಲೋನಿಯ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಸಿಗುವ ನಿಟ್ಟಿನಲ್ಲಿ ಪಾಲಕರು ಗಮನ ಹರಿಸಬೇಕು ಮತ್ತು ನಾವೆಲ್ಲ ಜಾತಿ, ಮತ, ಧರ್ಮಗಳ ಭೇದ ಭಾವ ಮರೆತು ಸಮಾಜದ ಒಳಿತಿಗಾಗಿ ಒಂದಾಗಿ ಮುಂದಿನ ಪೀಳಿಗೆಗೆ ಉತ್ತಮ ಸಮಾಜ ನಿರ್ಮಾಣ ಮಾಡಬೇಕೆಂದು ಅಭಿಪ್ರಾಯಪಟ್ಟರು.

ಕಾಲೋನಿಯ ಉಪಾಧ್ಯಕ್ಷರಾದ ಬಾಲಕೃಷ್ಣ ಕುಲಕರ್ಣಿ, ಹಣಮಂತರಾಯ, ವಿನೋದ, ಟೈಗರ್, ಸಿದ್ರಾಮಪ್ಪ, ವಿರೇಶ್ ಬೋಳಶೆಟ್ಟಿ, ಇನ್ನಿತರ ಸಂಘದ ಪದಾಧಿಕಾರಿಗಳು ಮತ್ತು ಕಾಲೋನಿಯ ನಿವಾಸಿಗಳು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...