ಕಲಬುರಗಿ| ಪಶು ವೈದ್ಯರನ್ನು ನೇಮಿಸಲು ಶಾಸಕ ಬಸವರಾಜ ಮತ್ತಿಮಡು ಆಗ್ರಹ

Date:

Share post:

ಕಲಬುರಗಿ: ಗ್ರಾಮೀಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಪಶು ವೈದ್ಯಕಿಯ ಆಸ್ಪತ್ರೆಗಳಲ್ಲಿ ಪಶು ವೈದ್ಯರಿಲ್ಲದೇ ಭಾರಿ ಸಮಸ್ಯೆ ಎದುರಿಸುವಂತಾಗಿದೆ. ಈ ವ್ಯಾಪ್ತಿಯ ಪಶು ಆಸ್ಪತ್ರೆಗಳಲ್ಲಿ ಇದ್ದ ವೈದ್ಯರಿಗೆ ಮೈಸೂರು ಭಾಗಕ್ಕೆ ವರ್ಗಾವಣೆ ಮಾಡಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಶಾಸಕ ಬಸವರಾಜ ಮತ್ತಿಮಡು ಆಗ್ರಹಿಸಿದರು.

ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಸಮಸ್ಯೆಯ ಗಂಭೀರತೆ ಕುರಿತು ಸದನದ ಗಮನಕ್ಕೆ ತಂದ ಶಾಸಕ ಮತ್ತಿಮಡು, ಇರುವ ವೈದ್ಯರಿಗೆ ಪ್ರಭಾರಿ ವಹಿಸಲಾಗಿದೆ. ಪಶು ಸಂಗೋಪನೆಯಲ್ಲಿ ರೈತರು ತಮ್ಮ ಪಶುಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ ಸಮಸ್ಯೆ ಎದುರಿಸಲಾಗುತ್ತಿದೆ ಎಂದು ಗಮನ ಸೆಳೆದರು.

 

ಶಾಸಕ ಪ್ರಶ್ನೆಗೆ ಉತ್ತರಿಸಿದ ಪಶು ಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ, ಕಲಬುರಗಿ ಗ್ರಾಮೀಣ ಕ್ಷೇತ್ರದಲ್ಲಿ 64 ಸಾವಿರ ಜಾನುವಾರುಗಳಿದ್ದು, 13 ಆಸ್ಪತ್ರೆಗಳಿರಬೇಕು. ಆದರೆ 31 ಆಸ್ಪತ್ರೆಗಳಿವೆ. 17 ಪಶು ವೈದ್ಯರು, 53 ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಬೇರೆ ಕಡೆ ಹೋಲಿಸಿದರೆ ವೈದ್ಯರಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ವೈದ್ಯರನ್ನು ನೀಡಲು ಪ್ರಯತ್ನಿಸಲಾಗುವುದು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಮತ್ತಿಮಡು, ಗ್ರಾಮೀಣ ಕ್ಷೇತ್ರದಲ್ಲಿ ನಾಲ್ಕು ತಾಲೂಕು ಬರುತ್ತವೆ. ವಾಹನಗಳು ಎಲ್ಲಿ ಓಡಾಡುತ್ತವೆ ತಿಳಿಯುತ್ತಿಲ್ಲ. ಹಲವು ಆಸ್ಪತ್ರೆಗಳು ಮುಚ್ಚಿವೆ. ಪಶು ಆಸ್ಪತ್ರೆಗಳಲ್ಲಿ ವೈದ್ಯರೇ ಇರಲ್ಲ. ಪ್ರಭಾರಿ ವೈದ್ಯರುಗಳೇ ಇದ್ದಾರೆ ಎಂದು ಆಕ್ಷೇಪಿಸಿದರು. ಸಚಿವರು ಸಮಸ್ಯೆ ಬಗೆಹರಿಸುವುದಾಗಿ ಸಮಜಾಯಿಸಿ ನೀಡಿದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...